ಬ್ರೇಕಿಂಗ್ ನ್ಯೂಸ್
04-09-26 08:14 pm HK News Staffer ದೇಶ - ವಿದೇಶ
ಕೊಲ್ಕತ್ತಾ, ಸೆ.4: ಪಶ್ಚಿಮ ಬಂಗಾಳದಲ್ಲಿ ಮುಂದಿನ ಒಂದು ವರ್ಷದಲ್ಲಿ ಆರೆಸ್ಸೆಸ್ ಅಂಗಸಂಸ್ಥೆಯ ವಿದ್ಯಾಭಾರತಿ ಮೂಲಕ ಒಂದು ಸಾವಿರ ಶಾಲೆಗಳನ್ನು ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.
ಪ್ರತಿ ಜಿಲ್ಲೆ, ನಗರಸಭೆ ಮತ್ತು ಪಂಚಾಯತ್ ಮಟ್ಟದಲ್ಲಿ ಹೊಸತಾಗಿ ಭಾರತೀಯ ಸಂಸ್ಕೃತಿ ಪ್ರಚುರಪಡಿಸುವ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಇದಲ್ಲದೆ, ಪ್ರತಿ ಶಾಲೆಯಲ್ಲೂ ವಂದೇ ಮಾತರಂ ಹಾಡು ಪೂರ್ತಿಯಾಗಿ ಹಾಡುವುದು ಕಡ್ಡಾಯ ಮಾಡಲಾಗಿದೆ. ಇದನ್ನು ಪಾಲಿಸದ ಶಾಲೆಗಳಿಗೆ ಸರ್ಕಾರದ ಅನುದಾನ, ಇನ್ನಿತರ ಸೌಲಭ್ಯಗಳನ್ನು ಕಡಿತ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದಲ್ಲದೆ, ರಾಜ್ಯದಲ್ಲಿ ನಾಲ್ಕು ಪ್ರತ್ಯೇಕ ಇಲಾಖೆಗಳಾಗಿರುವ ಶಿಕ್ಷಣ ಇಲಾಖೆಯನ್ನು ಒಂದೇ ಖಾತೆಯನ್ನಾಗಿ ಮಾಡಲಾಗುವುದು. ಮದ್ರಸಾ ಶಿಕ್ಷಣವನ್ನು ಆಡಳಿತದ ಭಾಗವಾಗಿಸಿದ್ದನ್ನು ತೆರವು ಮಾಡಲಾಗುವುದು ಎಂದು ಸಿಎಂ ಅಧಿಕಾರಿ ಹೇಳಿದ್ದಾರೆ. ವಿದ್ಯಾಭಾರತಿ ಸಂಸ್ಥೆಯ 74ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಈ ಮಾತುಗಳನ್ನಾಡಿದ್ದಾರೆ. ಆರೆಸ್ಸೆಸ್ ಅಂಗಸಂಸ್ಥೆಗಳ ಮೂಲಕ ದೇಶಾದ್ಯಂತ 12 ಸಾವಿರ ಶಾಲೆಗಳಿದ್ದು, ಹತ್ತು ಸಾವಿರ ಬಾಲ ಸಂಸ್ಕಾರ ಕೇಂದ್ರಗಳಿವೆ. ಪಶ್ಚಿಮ ಬಂಗಾಳದಲ್ಲಿ 313 ಶಾಲೆಗಳನ್ನು ವಿದ್ಯಾಭಾರತಿ ನಡೆಸುತ್ತಿದೆ.
ವಂದೇ ಮಾತರಂ ಹಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದ್ದು, ಇದನ್ನು ರಾಜ್ಯಾದ್ಯಂತ ಕಡ್ಡಾಯ ಪಾಲನೆಗೆ ಸೂಚಿಸಲಾಗಿದೆ. ಇದನ್ನು ಪಾಲಿಸದ ಶಾಲೆಗಳ ಸರ್ಕಾರಿ ಅನುದಾನ ಇನ್ನಿತರ ಸೌಲಭ್ಯಗಳನ್ನು ಕಡಿತ ಮಾಡಲಾಗುವುದು ಎಂದು ಸುವೇಂದು ಅಧಿಕಾರಿ ಹೇಳಿದ್ದಾರೆ. ಹಾಲಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಶಾಲೆಗಳ ಮೂಲಕ ಭಾರತೀಯ ಸಂಸ್ಕೃತಿ, ಸಂಪ್ರದಾಯ, ರಾಷ್ಟ್ರೀಯ ಮೌಲ್ಯಗಳನ್ನು ಜಾರಿಗೆ ತರಲು ಶ್ರಮಿಸುತ್ತಿದೆ ಎಂದವರು ಹೇಳಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm