ಬ್ರೇಕಿಂಗ್ ನ್ಯೂಸ್
11-01-21 12:13 pm Headline Karnataka News Network ದೇಶ - ವಿದೇಶ
ಮುಂಬೈ, ಜ.11 : ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಹರಡಿರುವುದಾಗಿ ದೃಢಪಡಿಸಲಾಗಿದೆ. ಮುರುಂಬಾ ಎಂಬ ಗ್ರಾಮದಲ್ಲಿ ಇಲ್ಲಿಯವರೆಗೂ ಸುಮಾರು 900 ಕೋಳಿಗಳು ಹಕ್ಕಿ ಜ್ವರದಿಂದ ಸಾವನ್ನಪ್ಪಿದೆ. ಅಲ್ಲಿನ ಜಿಲ್ಲಾಡಳಿತ ಸತ್ತ ಕೋಳಿಯ ರಕ್ತದ ಮಾದರಿಯನ್ನು ರಾಷ್ಟ್ರೀಯ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು.
ವರದಿಯಲ್ಲಿ ಕೋಳಿಗಳು ಹಕ್ಕಿ ಜ್ವರದಿಂದ ಮೃತಪಟ್ಟಿರುವುದು ಖಚಿತಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭಾನ್ ತಿಳಿಸಿದ್ದಾರೆ.
ಸುದ್ದಿ ಮಾಧ್ಯಮದಲ್ಲಿ ಮಾತನಾಡಿದ ಮುಲ್ಜಿಕರ್ ಹಕ್ಕಿ ಜ್ವರದಿಂದ ಮಾನಷ್ಯರ ಜೀವಕ್ಕೆ ಯಾವುದೇ ಅಪಾಯವಿಲ್ಲ. ಜನರನ್ನು ನಾವು ಈಗಾಗಲೇ ಪರೀಕ್ಷೆಗೆ ಒಳಪಡಿಸಿದ್ದೇವೆ. ಹಾಗಾಗಿ ಹಕ್ಕಿ ಜ್ವರ ಮನುಷ್ಯರಿಗೆ ಹರಡುತ್ತದೆ ಎಂದು ಯಾರು ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಮುನ್ನ ಕೇಂದ್ರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆ ಕೇರಳ, ರಾಜಸ್ಥಾನ, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ, ಗುಜರಾತ್ ಮತ್ತು ಉತ್ತರ ಪ್ರದೇಶದಲ್ಲಿ ಹಕ್ಕಿಜ್ವರ ಹರಡಿರುವದನ್ನು ದೃಢಪಡಿಸಿತ್ತು. ಈಗಾಗಲೇ ರೋಗ ಪೀಡಿತ ಪ್ರದೇಶಗಳಲ್ಲಿ ಹಕ್ಕಿ ಜ್ವರ ತಡೆಗಟ್ಟಲು ಎಲ್ಲ ರೀತಿಯ ಸಲಹೆಗಳನ್ನು ನೀಡಲಾಗುತ್ತಿದೆ ಎಂದು ತಿಳಿಸಿದೆ.
ಹಕ್ಕಿ ಜ್ವರ ಹರಡಿರುವ ಪ್ರದೇಶಗಳ ಕುರಿತಂತೆ ವಿಚಾರಣೆ ನಡೆಸಲು ಕೇಂದ್ರ ತಂಡಗಳನ್ನು ದೇಶದಲ್ಲಿ ರಚಿಸಲಾಗಿದ್ದು, ತಂಡಗಳು ಇದೀಗ ರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ. ಕೇಂದ್ರ ತಂಡವೊಂದು ಜನವರಿ 9 ರಂದು ಕೇರಳ ರಾಜ್ಯಕ್ಕೆ ತಲುಪಿದ್ದು ಪ್ರಸ್ತುತ ಅಲ್ಲಿನ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾಂಕ್ರಾಮಿಕ ರೋಗ ಕುರಿತಾಗಿ ತನಿಖೆ ನಡೆಸಲು ಆರಂಭಿಸಿದೆ. ಮತ್ತೊಂದು ತಂಡ ಜನವರಿ 10 ರಂದು ಹಿಮಾಚಲ ಪ್ರದೇಶಕ್ಕೆ ತಲುಪಿದ್ದು ಅಲ್ಲಿನ ಪ್ರದೇಶಗಳಲ್ಲಿ ಪರಿಶೀಲನೆ ನಡೆಸುತ್ತಿದೆ.
ಹಕ್ಕಿ ವಿಚಾರವಾಗಿ ತಪ್ಪು ಮಾಹಿತಿ ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹಾಗೂ ರೋಗ ಕುರಿತಂತೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ.
Bird flu has been confirmed as the cause of death of around 900 hens in the last few days at a poultry farm in Maharashtra’s Parbhani district, a senior official said on Monday.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm