ಬ್ರೇಕಿಂಗ್ ನ್ಯೂಸ್
17-01-21 03:41 pm Source: Drive Spark ದೇಶ - ವಿದೇಶ
ದೇಶದ ಮೊದಲ ಏರ್ ಟ್ಯಾಕ್ಸಿ ಸೇವೆಯನ್ನು ಹರಿಯಾಣ ರಾಜ್ಯದಲ್ಲಿ ಆರಂಭಿಸಲಾಗಿದೆ. ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಚಂಡೀಗಢ - ಹಿಸಾರ್ ನಡುವಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಈ ಸೇವೆಗೆ ಚಾಲನೆ ನೀಡಿದರು
ಮೊದಲ ಪ್ರಯಾಣಿಕರಿಗೆ ಬೋರ್ಡಿಂಗ್ ಪಾಸ್'ಗಳನ್ನು ಹಸ್ತಾಂತರಿಸುವ ಮೂಲಕ ಅವರು ಈ ಸೇವೆಯನ್ನು ಆರಂಭಿಸಿದರು. ಈ ಸೇವೆಯನ್ನು ಏರ್ ಟ್ಯಾಕ್ಸಿ ಏವಿಯೇಷನ್ ಕಂಪನಿಯು ಆರಂಭಿಸಿದೆ ಎಂದು ಅಧಿಕೃತ ಹೇಳಿಕೆ ಬಹಿರಂಗಪಡಿಸಿದೆ. ಈ ಸೇವೆಗಾಗಿ ಏರ್ ಟ್ಯಾಕ್ಸಿ ನಾಲ್ಕು ಸೀಟುಗಳ ವಿಮಾನಗಳನ್ನು ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೈಲಟ್ ಹೊರತುಪಡಿಸಿ ಇತರ ಮೂರು ಪ್ರಯಾಣಿಕರು ಈ ಏರ್ ಟ್ಯಾಕ್ಸಿಗಳಲ್ಲಿ ಪ್ರಯಾಣಿಸಬಹುದು. ಈ ಏರ್ ಟ್ಯಾಕ್ಸಿಯ ಸಹಾಯದಿಂದ ಚಂಡೀಗಢದಿಂದ ಹಿಸಾರ್ಗೆ ಇರುವ ದೂರವನ್ನು ಕೇವಲ 45 ನಿಮಿಷಗಳಲ್ಲಿ ಕ್ರಮಿಸಬಹುದು. ಇದರಿಂದ ಸಮಯವನ್ನು ಉಳಿಸಬಹುದು.

ಏರ್ ಟ್ಯಾಕ್ಸಿ ಸೇವೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಮನೋಹರ್ ಖಟ್ಟರ್ ಕೇಂದ್ರ ಸರ್ಕಾರದ 'ಉದಯ್' ಯೋಜನೆಯಡಿ ಈ ಸೇವೆಯನ್ನು ಆರಂಭಿಸಲಾಗಿದೆ ಎಂದು ಹೇಳಿದರು. ವಿಮಾನ ಹಾರಾಟವನ್ನು ಕೈಗೆಟುಕುವಂತೆ ಮಾಡಲು ಈ ಯೋಜನೆಯನ್ನು ಪರಿಚಯಿಸಲಾಗಿದೆ ಎಂದು ಹೇಳಿದರು.

ಏರ್ ಟ್ಯಾಕ್ಸಿ ಏವಿಯೇಷನ್ ಕಂಪನಿಯು ಹಿಸಾರ್ನಿಂದ ಚಂಡೀಗಢಕ್ಕೆ ರೂ.1,755 ಶುಲ್ಕವನ್ನು ನಿಗದಿಪಡಿಸಿದೆ ಎಂದು ಮನೋಹರ್ ಖಟ್ಟರ್ ತಿಳಿಸಿದರು. ಈ ಸೇವೆಯನ್ನು ಪಡೆಯಲು ಬಯಸುವವರು ಆನ್ಲೈನ್ ಮೂಲಕ ಬುಕ್ ಮಾಡಬೇಕಾಗುತ್ತದೆ.

ಇದರ ಜೊತೆಗೆ ಕಂಪನಿಯು ಖಾಸಗಿ ಬುಕಿಂಗ್ ಸೌಲಭ್ಯವನ್ನು ಒದಗಿಸಿದೆ ಎಂಬುದು ಗಮನಾರ್ಹ. ಇದಕ್ಕಾಗಿ ಬೇರೆ ಶುಲ್ಕವನ್ನು ವಿಧಿಸಲಾಗುತ್ತದೆ. ಆರಂಭದಲ್ಲಿ ಹಿಸಾರ್ - ಚಂಡೀಗಢ ನಡುವೆ ನಿಗದಿತ ವೇಳೆಯಲ್ಲಿ ಪ್ರತಿದಿನ ವಿಮಾನ ಸಂಚಾರವಿರಲಿದೆ.

ಒಬ್ಬ ಪ್ರಯಾಣಿಕ ಮಾತ್ರ ಟಿಕೆಟ್ ಕಾಯ್ದಿರಿಸಿದ್ದರೂ ಸಹ ನಂತರವೂ ವಿಮಾನವು ಹಾರಾಟವನ್ನು ನಡೆಸಲಿದೆ. ಗುರುವಾರದಿಂದ ಚಂಡೀಗಢ - ಹಿಸಾರ್ ವಾಯು ಸೇವೆಯನ್ನು ಆರಂಭಿಸಿರುವ ಕಂಪನಿಯು ಜನವರಿ 18ರಿಂದ ಹಿಸಾರ್ನಿಂದ ಡೆಹ್ರಾಡೂನ್ಗೆ ಹಾಗೂ ಹಿಸಾರ್ನಿಂದ ಧರ್ಮಶಾಲಾಗೆ ಜನವರಿ 23ರಂದು ವಿಮಾನ ಸೇವೆಯನ್ನು ಆರಂಭಿಸಲಿದೆ.

ಕೇಂದ್ರ ಸರ್ಕಾರವು ಹೊಸ ಯೋಜನೆಯಡಿ ತಾನು ಬಳಸುತ್ತಿರುವ ಹಳೆಯ ಸರ್ಕಾರಿ ವಾಹನಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದು, ಹೊಸ ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೊಳಿಸಲು ಮುಂದಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳನ್ನು ಗುರುತಿಸಲು ಪ್ರಧಾನಿ ಇಲಾಖೆಗಳಿಗೆ ಸೂಚಿಸಿದ್ದಾರೆ. ಹಳೆಯ ಸರ್ಕಾರಿ ವಾಹನಗಳನ್ನು ತೆಗೆದುಹಾಕುವುದರ ಮೂಲಕ ಸ್ಕ್ರ್ಯಾಪಿಂಗ್ ನೀತಿಗೆ ತನ್ನ ಬದ್ದತೆಯ ಸಂದೇಶವನ್ನು ನೀಡಲು ಸರ್ಕಾರವು ಮುಂದಾಗಿದೆ.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm