ಬ್ರೇಕಿಂಗ್ ನ್ಯೂಸ್
31-07-20 11:49 am Headline Karnataka News Network ದೇಶ - ವಿದೇಶ
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್-ಅಪ್ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ಗೂ ಸೋನಿಯಾ ಗಾಂಧಿ ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
18-04-25 05:38 pm
HK News Desk
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
Shamanur, CM Siddaramaiah: ರಾಜ್ಯದಲ್ಲಿ ಲಿಂಗಾಯತ...
16-04-25 11:03 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
18-04-25 10:17 pm
Mangalore Correspondent
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
ಸುರತ್ಕಲ್ ಎನ್ಐಟಿಕೆ ಸಂಸ್ಥೆಯಲ್ಲಿ ಮಹತ್ತರ ಫೈಲ್ ಡಿಲ...
17-04-25 04:39 pm
18-04-25 10:59 pm
Mangalore Correspondent
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm
Ullal Gang rape, Mangalore, Arrest: ಪಶ್ಚಿಮ ಬಂ...
17-04-25 09:56 pm
Gang Rape, Mangalore, Ullal, Crime: ಪಶ್ಚಿಮ ಬಂ...
17-04-25 03:19 pm