ಬ್ರೇಕಿಂಗ್ ನ್ಯೂಸ್
31-07-20 11:49 am Headline Karnataka News Network ದೇಶ - ವಿದೇಶ
ನವದೆಹಲಿ(ಜು.30): ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಿ.ಎಸ್.ರಾಣಾ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಇಂದು ಸಂಜೆ 7 ಗಂಟೆ ಸಮಯದಲ್ಲಿ ಸೋನಿಯಾ ಗಾಂಧಿ ಅಸ್ವಸ್ಥರಾಗಿದ್ದು, ಕೂಡಲೇ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ನಿಯಮಿತ ವೈದ್ಯಕೀಯ ತಪಾಸಣೆಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗಾಗಿ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುದ್ದಿ ಸಂಸ್ಥೆಗಳ ಪ್ರಕಾರ, ರೊಟೀನ್ ಚೆಕ್-ಅಪ್ಗಾಗಿ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಸೋನಿಯಾ ಅವರಿಗೆ ಕೆಲವು ತಪಾಸಣೆಗಳನ್ನು ಮಾಡಬೇಕಿದ್ದು, ಈ ಕಾರಣಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಅಂದರೆ ಫೆಬ್ರವರಿ ತಿಂಗಳಿನಲ್ಲಿಯೂ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಆಗಲೂ ಸಹ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಮಂಡನೆಯಾಗಿದ್ದ ಕೇಂದ್ರ ಬಜೆಟ್ಗೂ ಸೋನಿಯಾ ಗಾಂಧಿ ಗೈರಾಗಿದ್ದರು.
ಕಳೆದ ವರ್ಷ ಸೋನಿಯಾ ಗಾಂಧಿ ಅವರು ಅಮೆರಿಕದಲ್ಲಿ ಚಿಕಿತ್ಸೆ ಪಡೆದು ವಾಪಸ್ಸಾಗಿದ್ದರು. 2017 ಫೆಬ್ರವರಿಯಲ್ಲಿ ಕಲುಷಿತ ಆಹಾರ ಸೇವನೆ ಮತ್ತು 2018ರಲ್ಲಿ ಉಸಿರಾಟದ ಸಮಸ್ಯೆ ಕಾರಣಕ್ಕೆ ಸೋನಿಯಾ ಗಾಂಧಿ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಜ್ಞ ವೈದ್ಯ ಡಾ. ಡಿ.ಎಸ್. ರಾಣಾ ಅವರು ಆ ವೇಳೆ ತಪಾಸಣೆ ನಡೆಸಿ ಸೋನಿಯಾ ಅವರು ಅಸ್ತಮಾದಿಂದ ಬಳಲುತ್ತಿದ್ದಾರೆ ಎಂದಿದ್ದರು.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm