ಫುಟ್ಪಾತಲ್ಲಡಗಿದ್ದ ಜವರಾಯ; ಮಲಗಿದ್ದ ಕಾರ್ಮಿಕರ ಮೇಲೆ ಹರಿದ ಟ್ರಕ್ ! 15 ಮಂದಿ ಸ್ಥಳದಲ್ಲೇ ಸಾವು

19-01-21 03:47 pm       Headline Karnataka News Network   ದೇಶ - ವಿದೇಶ

ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಟ್ರಕ್‌ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಸೂರತ್, ಜ.19 ‌: ರಸ್ತೆ ಬದಿಯ ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಟ್ರಕ್‌ ಹರಿದ ಪರಿಣಾಮ 15 ಮಂದಿ ಕಾರ್ಮಿಕರು ದಾರುಣ ಸಾವು ಕಂಡ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಮೃತರು ರಾಜಸ್ಥಾನದಿಂದ ಬಂದಿದ್ದ ವಲಸೆ ಕಾರ್ಮಿಕರಾಗಿದ್ದು ಸೋಮವಾರ ರಾತ್ರಿ ಸೂರತ್ ನಗರದಿಂದ 60 ಕಿಮೀ ದೂರದಲ್ಲಿರುವ ಕೋಸಂಬಾ ಗ್ರಾಮದಲ್ಲಿ ಘಟನೆ ನಡೆದಿದೆ. ಸೂರತ್ - ಮಾಂಡವಿ ರಸ್ತೆಯ ಬದಿ ಫುಟ್ ಪಾತ್ ನಲ್ಲಿ ಕಾರ್ಮಿಕರು ಮಲಗಿದ್ದರು‌‌. ಟ್ರ್ಯಾಕ್ಟರ್‌ಗೆ ಡಿಕ್ಕಿಯಾದ ಟ್ರಕ್‌, ಚಾಲಕನ ನಿಯಂತ್ರಣಕ್ಕೆ ಸಿಗದೆ ಕಾರ್ಮಿಕರು ಮಲಗಿದ್ದ ಫುಟ್‌ಪಾತ್‌ ಮೇಲಿನಿಂದ ಸಾಗಿದೆ. ಅಲ್ಲಿ ಮಲಗಿದ್ದವರ ಪೈಕಿ 15 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೈದು ಮಂದಿ ತೀವ್ರ ಗಾಯಗೊಂಡಿದ್ದಾರೆ. 

ಅತಿ ವೇಗದಿಂದ ಟ್ರಕ್ ಚಲಾಯಿಸಿ ಅಪಘಾತಕ್ಕೆ ಕಾರಣವಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ‌ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಕಂಬನಿ ಮಿಡಿದಿದ್ದು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.‌ ಅಲ್ಲದೆ ಪ್ರಧಾನಿ ಪರಿಹಾರ ನಿಧಿಯಿಂದ ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡಲು ಆದೇಶ ಮಾಡಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾಣಿ ಕೂಡ, ಮೃತರ ಕುಟುಂಬಸ್ಥರಿಗೆ ತಲಾ ಎರಡು ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.

At least 15 people were killed after a truck ran over a total of 18 people sleeping on a footpath at Kim Char Rasta near Surat in Gujarat in the wee hours on Tuesday.