ಬ್ರೇಕಿಂಗ್ ನ್ಯೂಸ್
30-01-21 01:07 pm Headline Karnataka News Network ದೇಶ - ವಿದೇಶ
ಚೆನ್ನೈ,ಜ.30: ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಡಿ ಪೊಲೀಸರು ಬಂಧಿಸಲು ಬಂದ ವಿಚಾರ ತಿಳಿದ ಮಹಿಳೆ ತನಗೆ ತಾನೇ ಬೆಂಕಿ ಹಚ್ಚಿಕೊಂಡಿರುವ ಘಟನೆ ತಮಿಳು ನಗರದ ಬೆಸೆಂಟ್ ನಗರದಲ್ಲಿ ನಡೆದಿದೆ. ಮಹಿಳೆಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಿಳೆಯನ್ನು ಉಷಾ ಮತ್ತು ಆಕೆಯ ಪತಿಯನ್ನು ರತ್ನಂ ಎಂದು ಗುರುತಿಸಲಾಗಿದೆ. ಅಕ್ರಮ ಮದ್ಯ ಮಾರಾಟ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೂ 12ಕ್ಕೂ ಅಧಿಕ ಪ್ರಕರಣಗಳು ಈಗಾಗಲೇ ದಾಖಲಾಗಿದೆ. ಹಾಗಾಗಿ ಪೊಲೀಸರ ತಂಡ ಉಷಾಳನ್ನು ಬಂಧಿಸಲು ಒಡೈಕುಪ್ಪಂಗೆ ಹೋಗಿದೆ. ಈ ವಿಚಾರ ತಿಳಿದ ಮಹಿಳೆ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ತಾನು ಧರಿಸಿದ್ದ ಉಡುಪನ್ನು ಹರಿದು ಮೈ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ತಕ್ಷಣ ಆಕೆಯ ಮೇಲೆ ಗೋಣಿ ಚೀಲವನ್ನು ಹೊದಿಸಿ ನೀರು ಸುರಿದಿದ್ದಾರೆ. ಈ ಮೂಲಕ ಬೆಂಕಿ ನಂದಿಸಿದ್ದಾರೆ.
ಇದೀಗ ಆಕೆಗೆ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಹಿಳೆಯ ದೇಹ ಶೇ.50 ರಷ್ಟು ಭಾಗ ಸುಟ್ಟು ಹೋಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಘಟನೆಯಲ್ಲಿ ಪೊಲೀಸ್ ಅಧಿಕಾರಿಯೂ ಗಾಯಗೊಂಡಿದ್ದಾರೆ. ಮಹಿಳೆ ಮನೆಯಲ್ಲಿದ್ದ 37ಕ್ಕೂ ಅಧಿಕ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
In a shocking incident, a woman allegedly set herself on fire when police arrived to arrest her for allegedly selling illicit liquor in Besant Nagar of Tamil Nadu’s Chennai. She is currently undergoing treatment at a government hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm