ಬ್ರೇಕಿಂಗ್ ನ್ಯೂಸ್
01-02-21 01:55 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆಬ್ರವರಿ 1: ಆದಾಯ ತೆರಿಗೆ ಪಾವತಿಸುವ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ನೆಮ್ಮದಿಯ ಸುದ್ದಿ ನೀಡಿದೆ. ಇನ್ನು ಮುಂದೆ 75 ವರ್ಷ ದಾಟಿದ ಹಿರಿಯ ನಾಗರಿಕರು ಹಾಗೂ ಕೇವಲ ಪಿಂಚಣಿ ಮತ್ತು ಬಡ್ಡಿ ಮೂಲಕ ಆದಾಯ ಪಡೆದುಕೊಳ್ಳುವ ವ್ಯಕ್ತಿಗಳು ಇನ್ನು ಮುಂದೆ ಆದಾಯ ತೆರಿಗೆ ರಿಟರ್ನ್ಸ್ ಪಾವತಿ ಮಾಡುವ ಅಗತ್ಯವಿಲ್ಲ ಎಂದು ಸೋಮವಾರ ಬಜೆಟ್ ಮಂಡನೆ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವುದರಿಂದ ಹಿರಿಯ ನಾಗರಿಕರಿಗೆ ವಿನಾಯಿತಿ ನೀಡಲಾಗಿದೆ. ಆದರೆ ಅವರ ಬದಲು ಇನ್ನು ಮುಂದೆ ಸಂಬಂಧಿತ ಬ್ಯಾಂಕ್ಗಳು ಐಟಿಆರ್ ಸಲ್ಲಿಕೆ ಮಾಡಲಿವೆ.
ಹಾಗೆನೇ ಅನಿವಾಸಿ ಭಾರತೀಯರಿಗೆ ಬಜೆಟ್ನಲ್ಲಿ ಮತ್ತಷ್ಟು ಉತ್ತೇಜನ ನೀಡಲಾಗಿದೆ. ಅನಿವಾಸಿ ಭಾರತೀಯರ ವಿದೇಶಿ ನಿವೃತ್ತಿ ಫಂಡ್ನಲ್ಲಿನ ದುಪ್ಪಟ್ಟು ತೆರಿಗೆಯನ್ನು ತೆಗೆದುಹಾಕಲು ಸರ್ಕಾರ ಅಧಿಸೂಚನೆ ಹೊರಡಿಸಲಿದೆ ಎಂದು ನಿರ್ಮಲಾ ತಿಳಿಸಿದ್ದಾರೆ.

ಟ್ಯಾಕ್ಸ್ ರಿಟರ್ನ್ಸ್ ಅನ್ನು ಮರು ತೆರೆಯಲು ಇದ್ದ ಸಮಯದ ಮಿತಿಯನ್ನು ಮೂರು ವರ್ಷಗಳಿಗೆ ಇಳಿಸಲಾಗಿದೆ. ಪ್ರಸ್ತುತ ಅದು ಆರು ವರ್ಷಗಳವರೆಗೆ ಇತ್ತು. ಗಂಭೀರ ವಂಚನೆಗಳಲ್ಲಿಯೂ 50 ಲಕ್ಷಕ್ಕೂ ಅಧಿಕ ಮೊತ್ತದ ತೆರಿಗೆಯ ಸಾಧ್ಯತೆ ಇದ್ದರೆ ಮಾತ್ರ ಈ ಮಿತಿಯನ್ನು ಹೆಚ್ಚುವರಿಯಾಗಿ ನೀಡಬಹುದು.
ಆದಾರ ತೆರಿಗೆ ರಿಟರ್ನ್ಸ್ ಸಲ್ಲಿಸುವವರ ಸಂಖ್ಯೆ 2014ರಲ್ಲಿ 3.31 ಕೋಟಿ ಇದ್ದರೆ, ಅದು 2020ರ ವೇಳೆಗೆ 6.48 ಕೋಟಿಗೆ ಏರಿಕೆಯಾಗಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು. ನಮ್ಮ ತೆರಿಗೆ ವ್ಯವಸ್ಥೆಯು ಪಾರದರ್ಶಕವಾಗಬೇಕು. ನೇರ ತೆರಿಗೆ ವ್ಯವಸ್ಥೆಯಲ್ಲಿ ಸರ್ಕಾರವು ಸರಣಿ ಸುಧಾರಣೆಗಳನ್ನು ಆರಂಭಿಸಿದೆ. ತೆರಿಗೆ ದಕ್ಷತೆಯನ್ನು ಸುಧಾರಿಸಲು ನೇರ ತೆರಿಗೆ ಆಡಳಿತದಲ್ಲಿ ಮುಖರಹಿತ ಮೌಲ್ಯನಿರ್ಣಯ ಪದ್ಧತಿಯನ್ನು ಜಾರಿಗೊಳಿಸಲಾಗಿದೆ. ಸಣ್ಣ ತೆರಿಗೆದಾರರಿಗಾಗಿ ಖುದ್ದು ಹಾಜರಾಗುವ ಅಗತ್ಯವಿಲ್ಲದ ವಾಜ್ಯ ಪರಿಹಾರ ಪದ್ಧತಿ ಜಾರಿಗೆ ತರಲಾಗುತ್ತದೆ.
ಮಧ್ಯಮ ಮತ್ತು ಸಣ್ಣ ಉದ್ಯಮಗಳಲ್ಲಿನ ತೆರಿಗೆ ಲೆಕ್ಕಪರಿಶೋಧನೆ ಮಿತಿಯನ್ನು 5 ಕೋಟಿ ರೂಪಾಯಿಯಿಂದ 10 ಕೋಟಿ ರೂಗೆ ಹೆಚ್ಚಿಸಲಾಗಿದೆ.
Among several key announcements made by Union Finance Minister Nirmala Sitharaman in the Union Budget 2021-22, the senior citizens above 75 years with only pension income have now been exempted from filing the Income Tax returns.
05-03-26 09:40 pm
HK News Staffer
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm