ಬ್ರೇಕಿಂಗ್ ನ್ಯೂಸ್
02-02-21 12:45 pm Headline Karnataka News Network ದೇಶ - ವಿದೇಶ
ಕತಾರ್, ಫೆ.2: ಭಾರತ 72ನೇ ಗಣರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಜಾತಿ, ಮತ, ಪಂಥ, ವರ್ಗ, ವರ್ಣಗಳ ಭೇದ ಇಲ್ಲದೆ ಭಾರತೀಯರೆಲ್ಲಾ ಒಂದು ಎಂಬ ಆಶಯದೊಂದಿಗೆ 1950 ರ ಜನವರಿ 26 ರಂದು ಜಾರಿಗೆ ಬಂದ ನಮ್ಮ ಸಂವಿಧಾನದ ನೈಜ ಆಶಯವನ್ನು ಉಳಿಸುವ ಬಗ್ಗೆ ಭಾರತೀಯರು ಪ್ರತಿಜ್ಞಾ ಬದ್ಧರಾಗಬೇಕು. ಸಂವಿಧಾನವು ಘೋಷಿಸುವಂತಹ ಸಾರ್ವಭೌಮತೆ, ಸಹೋದರತ್ವ ಮತ್ತು ಸಮಾನತೆಯನ್ನು ಎತ್ತಿಹಿಡಿದು ಬಲಿಷ್ಠ ಭಾರತದ ನಿರ್ಮಾಣ ನಮ್ಮ ಧ್ಯೇಯವಾಗಬೇಕು ಎಂದು ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಂತರಾಷ್ಟ್ರೀಯ ಸಮಿತಿ ನಾಯಕರಾದ ಡಾ. ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ ಹೇಳಿದರು.
ಕತ್ತರ್ ಕೆಸಿಎಫ್ ಸಾಮಾಜಿಕ ಮಾಧ್ಯಮ ಝೂಮ್ ಮೂಲಕ ಆಯೋಜಿಸಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣ ಮಾಡಿದ ಅವರು, ಮಹಾಕವಿ ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಎಂಬ ಸುಂದರ ಆಶಯವು ನಮ್ಮ ಕನಸಾಗಿದೆ ಎಂದರು.
ಗಣ್ಯ ಅತಿಥಿಯಾಗಿದ್ದ ಕತಾರ್ ಇಂಡಿಯನ್ ಕಲ್ಚರಲ್ ಸೆಂಟರ್ ನ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಮಾತನಾಡಿ, ಅನಿವಾಸಿ ಕನ್ನಡಿಗರ ನಡುವೆ ಕೆಸಿಎಫ್ ನಡೆಸುತ್ತಿರುವ ಸಮಾಜಮುಖಿ ಚಟುವಟಿಕೆಗಳ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಸಂಘಟನೆಯ ಕಾರ್ಯಕರ್ತರನ್ನು ಅಭಿನಂದಿಸಿದರು. ಹಾಫಿಲ್ ಉಮರುಲ್ ಫಾರೂಕ್ ಸಖಾಫಿಯವರ ದುವಾದೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮವನ್ನು ಕೆಸಿಎಫ್ ಅಂತರ್ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾಬ್ ಕಮರುದ್ದೀನ್ ಗೂಡಿನಬಳಿ ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಕತಾರ್ ರಾಯಭಾರಿ ಕಚೇರಿ ಅಧೀನದಲ್ಲಿರುವ ವಿವಿಧ ಸಂಸ್ಥೆಗಳ MC (ಮ್ಯಾನೇಜ್ಮೆಂಟ್ ಕಮಿಟಿ) ಸದಸ್ಯರುಗಳಾಗಿ ಆಯ್ಕೆಯಾದ ಕನ್ನಡಿಗರನ್ನು ಆಹ್ವಾನಿಸಿ ಕೆಸಿಎಫ್ ವತಿಯಿಂದ ಅಭಿನಂದಿಸಲಾಯ್ತು. ICC ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು, ICBF ನಿರ್ವಹಣಾ ಸಮಿತಿ ಸದಸ್ಯರಾದ ದಿನೇಶ್ ಗೌಡ ಹಾಗೂ ISC ನಿರ್ವಹಣಾ ಸದಸ್ಯರಾದ ಟಿ. ಶ್ರೀನಿವಾಸ ಅವರನ್ನು ಕೆಸಿಎಫ್ ಕತಾರ್ ಸಂಘಟನೆ ಅಧ್ಯಕ್ಷರಾದ ಹನೀಫ್ ಪಾತೂರು ಅಭಿನಂದಿಸಿದರು.
ಕೆಸಿಎಫ್ ಕತ್ತರ್ ರಾಷ್ಟ್ರೀಯ ಅಧ್ಯಕ್ಷರಾಗಿರುವ ಯೂಸುಫ್ ಸಖಾಫಿ ಅಯ್ಯಂಗೇರಿ ಅಧ್ಯಕ್ಷತೆ ವಹಿಸಿದ್ದರು. ಝಾಕಿರ್ ಚಿಕ್ಕಮಗಳೂರು ಕಾರ್ಯಕ್ರಮ ನಿರೂಪಿಸಿದರೆ, ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಸಿದ್ದೀಕ್ ಹಂಡುಗುಳಿ ಸ್ವಾಗತಿಸಿದರು. ರಿಶಾದ್ ಮಧುವನ್ ವಂದಿಸಿದರು.
72nd Republic day in Qatar by Karnataka Culture Federation celebrated via Video Conference.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm