ಬ್ರೇಕಿಂಗ್ ನ್ಯೂಸ್
07-02-21 02:49 pm Headline Karnataka News Network ದೇಶ - ವಿದೇಶ
ಚಮೋಲಿ; ಫೆಬ್ರವರಿ 7: ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದು ಪ್ರವಾಹ ಉಂಟಾಗಿದ್ದು, 150 ಮಂದಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಈಗಾಗಲೇ ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದ್ದು, ಚಮೋಲಿ ಜಿಲ್ಲಾಡಳಿತ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ. ಜೋಶಿಮಠದ ಧೌಲಿ ಗಂಗಾ ಕಣಿವೆಯಲ್ಲಿ ಹಿಮನದಿ ಒಡೆದ ಪರಿಣಾಮ ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಯೋಜನೆಯ ಡ್ಯಾಮ್ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ನಾಪತ್ತೆಯಾಗಿದ್ದು, ಅವರೆಲ್ಲಾ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರಬಹುದೆಂದು ಅಧಿಕಾರಿಗಳು ಶಂಕೆ ವ್ಯಕ್ತವಾಗಿದೆ.





ಇಂಡೋ - ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್ಡಿಆರ್ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ.
ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರಾಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಈ ಸಂಬಂಧ ತುರ್ತು ಸಭೆ ಕರೆದಿದ್ದಾರೆ.
ಭೀಕರ ಪ್ರವಾಹದಿಂದ ಹೈ ಅಲರ್ಟ್ ಘೋಷಣೆ:
ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠದ ರಾಣಿ ಗ್ರಾಮದಲ್ಲಿ ಹಿಮನದಿ ಒಡೆದಿದ್ದು, ಸುತ್ತಲಿನ ಪ್ರದೇಶದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಿಮನದಿ ಒಡೆದ ಕಾರಣ ದೌಲಿಗಂಗಾ ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಹೀಗಾಗಿ ಪ್ರವಾಹ ಉಂಟಾಗಿದ್ದು, ರಾಣಿ ಗ್ರಾಮದ ಜನರನ್ನು ಸ್ಥಳಾಂತರಿಸಲಾಗುತ್ತಿದೆ. ಜೋಶಿಮಠದಲ್ಲಿ ನಡೆಯುತ್ತಿರುವ ರೈಲ್ವೆ ನಿರ್ಮಾಣ ಕಾಮಗಾರಿ ಸೇರಿದಂತೆ ಎಲ್ಲಾ ಕೆಲಸಗಳನ್ನು ಸ್ಥಗಿತಗೊಳಿಸಲಾಗಿದೆ. ವಿಷ್ಣುಪ್ರಯಾಗ್, ರುದ್ರಪ್ರಯಾಗ್, ರಿಷಿಕೇಶ್, ಹರಿದ್ವಾರ ಹಾಗೂ ಗಂಗಾ ತೀರಕ್ಕೆ ಹೋಗದಂತೆ ಜನರಿಗೆ ಚಮೋಲಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ರಿಷಿ ಗಂಗಾ ತಪೋವನ್ ಜಲ ಜಲವಿದ್ಯುತ್ ಸ್ಥಾವರಕ್ಕೂ ಹಾನಿಯಾಗುವ ಸಾಧ್ಯತೆ ಹೆಚ್ಚಿದ್ದು, ಅಣೆಕಟ್ಟು ಬಳಿ ಜಿಲ್ಲಾಡಳಿತ ಮತ್ತು ಪೊಲೀಸ್ ಅಧಿಕಾರಿಗಳ ತಂಡವು ಬೀಡುಬಿಟ್ಟಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಎಸ್ಡಿಆರ್ಎಫ್ ತಂಡ ಕೂಡ ಗ್ರಾಮಕ್ಕೆ ಆಗಮಿಸಿದೆ.
At least 150 workers are feared missing after a portion of Nanda Devi glacier broke off in Tapovan area of Joshimath in Uttarakhand’s Chamoli district on Sunday morning and damaged the Rishiganga dam on Alaknanda river.
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm