ಬ್ರೇಕಿಂಗ್ ನ್ಯೂಸ್
10-02-21 11:58 am Headline Karnataka News Network ದೇಶ - ವಿದೇಶ
ಬೆಂಗಳೂರು, ಫೆ.10: ಕೇರಳದಿಂದ ಕರ್ನಾಟಕದ 5 ಜಿಲ್ಲೆಗಳಿಗೆ ಬರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರವನ್ನು ತರಬೇಕು. ಕರ್ನಾಟಕ ಸರ್ಕಾರ ಈ ಕುರಿತು ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು ಮತ್ತು ಮೈಸೂರು ಜಿಲ್ಲೆಗಳಿಗೆ ವಿದ್ಯಾಭ್ಯಾಸಕ್ಕಾಗಿ ಬರುವ ವಿದ್ಯಾರ್ಥಿಗಳು 72 ಗಂಟೆಗಳ ಮೊದಲಿನ ಕೋವಿಡ್ ನೆಗೆಟೀವ್ ಪ್ರಮಾಣ ಪತ್ರ ತರಬೇಕು.
ಕೇರಳದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕೇರಳದಿಂದ ಆಗಮಿಸುವ ವಿದ್ಯಾರ್ಥಿಗಳಿಂದ ರಾಜ್ಯದಲ್ಲಿ ಕೋವಿಡ್ ಸೋಂಕು ಹರಡುವಿಕೆ ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ. ಕೇರಳದಿಂದ ಆಗಮಿಸಿದ ವಿದ್ಯಾರ್ಥಿಗಳಿಗೆ 15 ದಿನಕ್ಕೊಮ್ಮೆ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ತೀರ್ಮಾನಿಸಿದೆ.

ಕೇರಳದ ಉತ್ತರ ಭಾಗದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದ್ದರಿಂದ, ನರ್ಸಿಂಗ್, ಎಂಬಿಬಿಎಸ್ ಸೇರಿದಂತೆ ಇತರ ಕೋರ್ಸ್ಗಳ ವ್ಯಾಸಂಗಕ್ಕೆ ಬರುವ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆ ಕಾಲೇಜುಗಳಿಗೆ ಸೂಚಿಸಿದೆ.
ಡಿಸೆಂಬರ್ 25ರ ಬಳಿಕ ಮಂಗಳೂರಿನ 2 ಇಂಜಿನಿಯರಿಂಗ್ ಕಾಲೇಜು, 4 ನರ್ಸಿಂಗ್ ಕಾಲೇಜುಗಳಲ್ಲಿ ಕೇರಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಿದಾಗ 2806 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕಳೆದ ವಾರ ಮಂಗಳೂರಿನ ನರ್ಸಿಂಗ್ ಕಾಲೇಜಿಗೆ ಆಗಮಿಸಿದ ಕೇರಳದ 49 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಪತ್ತೆಯಾಗಿತ್ತು. ದಕ್ಷಿಣ ಕನ್ನಡ ಜಿಲ್ಲಾಡಳಿತ ಗಡಿ ಪ್ರದೇಶದಲ್ಲಿ ಕಣ್ಗಾವಲವನ್ನು ಹೆಚ್ಚಿಸಲು ತೀರ್ಮಾನವನ್ನು ಕೈಗೊಂಡಿದೆ.
ಫೆಬ್ರವರಿ 9ರ ಮಂಗಳವಾರ ಕೇರಳದಲ್ಲಿ 5,214 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 9,77,395ಕ್ಕೆ ಏರಿಕೆಯಾಗಿದೆ.
The Karnataka government has announced that students coming from Kerala to Dakshina Kannada, Udupi, Mysuru, Kodagu and Chamarajanagar districts must carry a negative COVID-19 test certificate that is not older than 72 hours.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm