ಬ್ರೇಕಿಂಗ್ ನ್ಯೂಸ್
14-02-21 12:10 pm Headline Karnataka News Network ದೇಶ - ವಿದೇಶ
ಕರ್ನೂಲ್, ಫೆ.14: ಇಲ್ಲಿನ ಕರ್ನೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆ ಗ್ರಾಮದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರೆ ಹೊರಟಿದ್ದ ಕುಟುಂಬದ ಮಿನಿ ವ್ಯಾನ್ ಟ್ರಕ್ ಒಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ತಾಲೂಕು ವ್ಯಾಪ್ತಿಯ ಮಾದಾರಪುರಂ ಗ್ರಾಮದಲ್ಲಿ ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದೆ.
ಎಂಟು ಮಹಿಳೆಯರು, ಐದು ಪುರುಷರು ಮತ್ತು ಒಂದು ಮಗು ಮೃತರಲ್ಲಿ ಸೇರಿದ್ದು ಅಪಘಾತದ ತೀವ್ರತೆಗೆ ದೇಹಗಳು ಅಪ್ಪಚ್ಚಿಯಾಗಿದ್ದವು. ಒಂದಕ್ಕೊಂದು ಅಂಟಿಕೊಂಡಿದ್ದ ವಾಹನವನ್ನು ಜೆಸಿಬಿ ತಂದು ಹಗ್ಗ ಕಟ್ಟಿ ಎಳೆದು ಬಿಡಿಸಲಾಯ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ಅತಿ ವೇಗದಿಂದ ಇದ್ದ ಅಥವಾ ವೇಗದಲ್ಲಿರುವಾಗಲೇ ವ್ಯಾನ್ ಟೈರ್ ಸಿಡಿದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಪಘಾತದ ಕಾರಣ ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಬಗ್ಗೆ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಕರ್ನೂಲ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕರ್ನೂಲ್ ಜಿಲ್ಲಾಧಿಕಾರಿ ಪ್ರಕಾರ, ಚಿತ್ತೂರು ಜಿಲ್ಲೆಯಿಂದ ಹೊರಟಿದ್ದ ಮಿನಿ ವ್ಯಾನ್ ನಲ್ಲಿ 18 ಮಂದಿ ಇದ್ದರು. 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Visuals: 14 killed, 4 injured in truck-mini van collision near Madapuram in Veldurthi Mandal of #Kurnool district. pic.twitter.com/WRrWhEwMMh
— TOI Vijaywada (@TOIVijaywada) February 14, 2021
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm