ಬ್ರೇಕಿಂಗ್ ನ್ಯೂಸ್
14-02-21 12:10 pm Headline Karnataka News Network ದೇಶ - ವಿದೇಶ
ಕರ್ನೂಲ್, ಫೆ.14: ಇಲ್ಲಿನ ಕರ್ನೂರ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ನಸುಕಿನಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಚಿತ್ತೂರು ಜಿಲ್ಲೆಯ ಮದನಪಲ್ಲೆ ಗ್ರಾಮದಿಂದ ರಾಜಸ್ಥಾನದ ಅಜ್ಮೀರ್ ಗೆ ಯಾತ್ರೆ ಹೊರಟಿದ್ದ ಕುಟುಂಬದ ಮಿನಿ ವ್ಯಾನ್ ಟ್ರಕ್ ಒಂದಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕರ್ನೂಲ್ ಜಿಲ್ಲೆಯ ವೇಲ್ದುರ್ತಿ ತಾಲೂಕು ವ್ಯಾಪ್ತಿಯ ಮಾದಾರಪುರಂ ಗ್ರಾಮದಲ್ಲಿ ನಸುಕಿನ 3.30ರ ಸುಮಾರಿಗೆ ಘಟನೆ ನಡೆದಿದೆ.


ಎಂಟು ಮಹಿಳೆಯರು, ಐದು ಪುರುಷರು ಮತ್ತು ಒಂದು ಮಗು ಮೃತರಲ್ಲಿ ಸೇರಿದ್ದು ಅಪಘಾತದ ತೀವ್ರತೆಗೆ ದೇಹಗಳು ಅಪ್ಪಚ್ಚಿಯಾಗಿದ್ದವು. ಒಂದಕ್ಕೊಂದು ಅಂಟಿಕೊಂಡಿದ್ದ ವಾಹನವನ್ನು ಜೆಸಿಬಿ ತಂದು ಹಗ್ಗ ಕಟ್ಟಿ ಎಳೆದು ಬಿಡಿಸಲಾಯ್ತು. ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ತೀವ್ರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.



ಪೊಲೀಸರ ಪ್ರಕಾರ, ಮಿನಿ ವ್ಯಾನ್ ಚಾಲಕ ಅತಿ ವೇಗದಿಂದ ಇದ್ದ ಅಥವಾ ವೇಗದಲ್ಲಿರುವಾಗಲೇ ವ್ಯಾನ್ ಟೈರ್ ಸಿಡಿದು ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗುತ್ತಿದೆ. ಅಪಘಾತದ ಕಾರಣ ಹೆದ್ದಾರಿಯಲ್ಲಿ ಪೂರ್ತಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಘಟನೆ ಬಗ್ಗೆ ಸಿಎಂ ಜಗನ್ಮೋಹನ ರೆಡ್ಡಿ ಆಘಾತ ವ್ಯಕ್ತಪಡಿಸಿದ್ದು ಗಾಯಾಳುಗಳಿಗೆ ಉನ್ನತ ಮಟ್ಟದ ಚಿಕಿತ್ಸೆ ನೀಡುವಂತೆ ಕರ್ನೂಲ್ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದಾರೆ. ಕರ್ನೂಲ್ ಜಿಲ್ಲಾಧಿಕಾರಿ ಪ್ರಕಾರ, ಚಿತ್ತೂರು ಜಿಲ್ಲೆಯಿಂದ ಹೊರಟಿದ್ದ ಮಿನಿ ವ್ಯಾನ್ ನಲ್ಲಿ 18 ಮಂದಿ ಇದ್ದರು. 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Visuals: 14 killed, 4 injured in truck-mini van collision near Madapuram in Veldurthi Mandal of #Kurnool district. pic.twitter.com/WRrWhEwMMh
— TOI Vijaywada (@TOIVijaywada) February 14, 2021
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm