ಬ್ರೇಕಿಂಗ್ ನ್ಯೂಸ್
14-02-21 03:08 pm Headline Karnataka News Network ದೇಶ - ವಿದೇಶ
ಶ್ರೀನಗರ, ಫೆ.14: ಪುಲ್ವಾಮಾ ದಾಳಿಗೆ ವರ್ಷ ತುಂಬುತ್ತಿದ್ದಂತೆಯೇ ಅತ್ತ ಮತ್ತೊಂದು ದಾಳಿಗೆ ಉಗ್ರರು ಸಂಚು ಹೂಡಿದ್ದರೇ ಅನ್ನುವ ಶಂಕೆ ಮೂಡಿದೆ. ಪುಲ್ವಾಮಾ ದಾಳಿಯ ಎರಡನೇ ವರ್ಷಾಚರಣೆ ದಿನವೇ ಜಮ್ಮು ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಸ್ಫೋಟಕ ಪತ್ತೆಯಾಗಿದೆ.
ಪುಲ್ವಾಮಾ ದಾಳಿ ದಿನವಾದ ಫೆ.14ರ ಭಾನುವಾರ ಜಮ್ಮು ಕಾಶ್ಮೀರ ಪೊಲೀಸರು ಅಲರ್ಟ್ ಆಗಿದ್ದರು. ಪೊಲೀಸ್ ಪಡೆ ಗಸ್ತು ನಿರತ ಇರುವಾಗಲೇ ಜನನಿಬಿಡ ಜಮ್ಮು ಬಸ್ ನಿಲ್ದಾಣದಲ್ಲಿ ಏಳು ಕೇಜಿಯಷ್ಟು ಐಇಡಿ ಸ್ಫೋಟಕಗಳು ಪತ್ತೆಯಾಗಿವೆ. ಈ ದಿನವೇ ಮತ್ತೊಂದು ದೊಡ್ಡ ಮಟ್ಟದ ದಾಳಿಗೆ ಉಗ್ರರು ಸಂಚು ರೂಪಿಸಿದ್ದರು ಎನ್ನಲಾಗುತ್ತಿದ್ದು, ಜಮ್ಮು ಪೊಲೀಸರ ಸಕಾಲಿಕ ಕಾರ್ಯಾಚರಣೆಯಿಂದ ಆಪತ್ತು ತಪ್ಪಿದಂತಾಗಿದೆ.


ಕಳೆದ ಒಂದು ವಾರದಲ್ಲಿ ಜಮ್ಮು ಕಾಶ್ಮೀರದ ವಿವಿಧೆಡೆ ರಾಜ್ಯ ಪೊಲೀಸರು ಸೇರಿದಂತೆ ಸೇನಾಪಡೆ, ಸಿಆರ್ ಪಿಎಫ್ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಈ ವೇಳೆ, ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಪುಲ್ವಾಮಾ ದಾಳಿಯ ವರ್ಷಾಚರಣೆಯಂದೇ ಮತ್ತೊಂದು ದಾಳಿಗೆ ಸಿದ್ಧತೆ ನಡೆಸಿದ್ದರೇ ಎನ್ನುವ ಅನುಮಾನ ಮೂಡಿದೆ. ಒಂದೇ ವಾರದಲ್ಲಿ ಹಿದಾಯತುಲ್ಲಾ ಮಲಿಕ್ ಮತ್ತು ಝಹೂರ್ ಅಹ್ಮದ್ ರಾಥೋರ್ ಎಂಬ ಇಬ್ಬರು ಉಗ್ರರು ಬಂಧಿತರಾಗಿದ್ದರು. ಹಿದಾಯತುಲ್ಲಾ ಮಲಿಕ್, ಪಾಕಿಸ್ತಾನ ಮೂಲದ ಜೈಶ್ ಇ -ಮಹಮ್ಮದ್ ಉಗ್ರವಾದಿ ಸಂಘಟನೆಯಿಂದ ಪ್ರೇರಿತಗೊಂಡು ರಚಿಸಿದ್ದ ಲಷ್ಕರ್ ಇ –ಮುಸ್ತಫಾ ಹೆಸರಿನ ಸಂಘಟನೆಯ ಪ್ರಮುಖನಾಗಿದ್ದ.



ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜಮ್ಮು ಪೊಲೀಸರು ಆತನನ್ನು ಸೆರೆಹಿಡಿದಿದ್ದರು. ಝಹೂರ್ ಅಹ್ಮದ್ ರಾಥೋರ್, ಕಳೆದ ವರ್ಷ ಬಿಜೆಪಿ ಕಾರ್ಯಕರ್ತರು ಮತ್ತು ಪೊಲೀಸ್ ಅಧಿಕಾರಿಗಳನ್ನು ಕೊಂದಿದ್ದ ಇನ್ನೊಬ್ಬ ಉಗ್ರನಾಗಿದ್ದು, ಜಮ್ಮು ಕಾಶ್ಮೀರದ ಗುಪ್ತಚರ ಪಡೆಯೇ ಆತನ ಟಾರ್ಗೆಟ್ ಆಗಿತ್ತು. ಹಿದಾಯತುಲ್ಲಾ ಫೆ.6ರಂದು ಮತ್ತು ರಾಥೋರ್ ಎರಡು ದಿನಗಳ ಹಿಂದೆ ಸಾಂಬಾ ಜಿಲ್ಲೆಯಲ್ಲಿ ಬಂಧನವಾಗಿದ್ದ.
ಸ್ಫೋಟಕ ಪತ್ತೆ ಹಿನ್ನೆಲೆಯಲ್ಲಿ ಕಾಶ್ಮೀರ ಮತ್ತು ಜಮ್ಮುವಿನ ಕಣಿವೆಗಳಲ್ಲಿ ಶೋಧ ಕಾರ್ಯಾಚರಣೆ ಹೆಚ್ಚಿಸಿದ್ದಾರೆ. ಜನನಿಬಿಡ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ತಂದು ಇರಿಸಿದ್ದು ಯಾರೆನ್ನುವುದರ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
A7-kilogram Improvised Explosive Device (IED) was detected on Sunday near the crowded general bus stand area in Jammu.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm