ಬ್ರೇಕಿಂಗ್ ನ್ಯೂಸ್
15-02-21 02:09 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.15 : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಂತ್ರಗಾರಿಕೆ ಜೋರಾಗಿ ಸಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಇಂದಿನಿಂದಲೇ ರಾಜ್ಯದ ಜನತೆಗೆ ಐದು ರೂಪಾಯಿಗೆ ಊಟ ನೀಡಲು ಸಿದ್ಧವಾಗಿದೆ. ಈ ಯೋಜನೆಗೆ ‘ಮಾ’ ಎಂದು ಹೆಸರಿಡಲಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ (TMC) ‘‘ಮಾ, ಮಾಟಿ, ಮನುಷ್’’ (ತಾಯಿ, ಭೂಮಿ, ಮನುಷ್ಯ) ಎಂಬ ಘೋಷವಾಕ್ಯದಿಂದಲೇ ಯೋಜನೆಯ ಹೆಸರನ್ನು ಆರಿಸಿಕೊಳ್ಳಲಾಗಿದೆ.
ಆರಂಭಿಕ ಹಂತದಲ್ಲಿ ಕೋಲ್ಕತ್ತಾ ನಗರದ 16 ಕಡೆ ‘ಮಾ’ ಯೋಜನೆ ಜಾರಿಯಾಗಲಿದ್ದು, ನಂತರದ ದಿನಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಾ ಯೋಜನೆಯಡಿಯಲ್ಲಿ ಸಿಗುವ ಊಟಕ್ಕೆ ಅನ್ನ, ದಾಲ್, ತರಕಾರಿ ಪದಾರ್ಥ ಮತ್ತು ಮೊಟ್ಟೆಯನ್ನು ನೀಡಲಾಗುವುದು. ಒಂದು ತಟ್ಟೆ ಊಟಕ್ಕೆ ₹5 ಇರಲಿದ್ದು, ನಿಗದಿತ ಸಮಯದಲ್ಲಿ ಊಟ ದೊರೆಯಲಿದೆ ಎಂದು ಯೋಜನೆಯ ಕುರಿತಾಗಿ ಕೋಲ್ಕತ್ತಾ ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಗಾಗಿಯೇ ಬಜೆಟ್ನಲ್ಲಿ ಮೊತ್ತವನ್ನು ತೆಗೆದಿರಿಸಲಾಗಿದ್ದು ಕ್ರಮೇಣ ನಗರ, ಸಣ್ಣ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳ ಜನರನ್ನೂ ‘ಮಾ’ ತಲುಪಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೊವಿಡ್ 19 ಸಾಂಕ್ರಾಮಿಕದಿಂದ ಕೆಲಸ ಕಳೆದುಕೊಂಡ ವಲಸೆ ಕಾರ್ಮಿಕರಿಗೆಂದೇ ಟಿಎಂಸಿ ಪಕ್ಷವು ದೀದಿರ್ ರಾನಾಘರ್ (ದೀದಿಯ ಅಡುಗೆಕೋಣೆ) ಎಂಬ ಯೋಜನೆ ಜಾರಿಗೆ ತಂದಿತ್ತು. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಸಿಪಿಐ(ಎಂ) ಪಕ್ಷವೂ ‘ಶ್ರಮಜೀವಿ ಕ್ಯಾಂಟಿನ್’ ಆರಂಭಿಸಿತ್ತು. ಜೊತೆಗೆ, ಸುಮಾರು 50 ಆರೋಗ್ಯ ಕೇಂದ್ರ ಆರಂಭಿಸಿ, ಸಂಕಷ್ಟದಲ್ಲಿರುವವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಗಮನ ಸೆಳೆದಿತ್ತು.
ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 294 ಸ್ಥಾನಗಳಲ್ಲಿ ಕನಿಷ್ಟ 200 ಸ್ಥಾನಗಳನ್ನಾದರೂ ಬಾಚಿಕೊಳ್ಳುವ ಉಮೇದಿಯಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕಲು ಟಿಎಂಸಿ ಪ್ರಯತ್ನಿಸುತ್ತಲೇ ಇದೆ. ಸದ್ಯ ಈ ಪ್ರಯತ್ನದ ಒಂದು ಭಾಗವೆಂಬಂತೆ ₹5ಕ್ಕೆ ಊಟ ನೀಡುವ ಯೋಜನೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am