ಬ್ರೇಕಿಂಗ್ ನ್ಯೂಸ್
15-02-21 02:09 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಫೆ.15 : ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ತಂತ್ರಗಾರಿಕೆ ಜೋರಾಗಿ ಸಾಗುತ್ತಿದೆ. ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡಿರುವ ಮಮತಾ ಬ್ಯಾನರ್ಜಿ ಸರ್ಕಾರ ಇಂದಿನಿಂದಲೇ ರಾಜ್ಯದ ಜನತೆಗೆ ಐದು ರೂಪಾಯಿಗೆ ಊಟ ನೀಡಲು ಸಿದ್ಧವಾಗಿದೆ. ಈ ಯೋಜನೆಗೆ ‘ಮಾ’ ಎಂದು ಹೆಸರಿಡಲಾಗಿದ್ದು, ತೃಣಮೂಲ ಕಾಂಗ್ರೆಸ್ ಪಕ್ಷದ (TMC) ‘‘ಮಾ, ಮಾಟಿ, ಮನುಷ್’’ (ತಾಯಿ, ಭೂಮಿ, ಮನುಷ್ಯ) ಎಂಬ ಘೋಷವಾಕ್ಯದಿಂದಲೇ ಯೋಜನೆಯ ಹೆಸರನ್ನು ಆರಿಸಿಕೊಳ್ಳಲಾಗಿದೆ.
ಆರಂಭಿಕ ಹಂತದಲ್ಲಿ ಕೋಲ್ಕತ್ತಾ ನಗರದ 16 ಕಡೆ ‘ಮಾ’ ಯೋಜನೆ ಜಾರಿಯಾಗಲಿದ್ದು, ನಂತರದ ದಿನಗಳಲ್ಲಿ ರಾಜ್ಯದೆಲ್ಲೆಡೆ ವಿಸ್ತರಿಸಲು ನಿರ್ಧರಿಸಲಾಗಿದೆ.
ಮಾ ಯೋಜನೆಯಡಿಯಲ್ಲಿ ಸಿಗುವ ಊಟಕ್ಕೆ ಅನ್ನ, ದಾಲ್, ತರಕಾರಿ ಪದಾರ್ಥ ಮತ್ತು ಮೊಟ್ಟೆಯನ್ನು ನೀಡಲಾಗುವುದು. ಒಂದು ತಟ್ಟೆ ಊಟಕ್ಕೆ ₹5 ಇರಲಿದ್ದು, ನಿಗದಿತ ಸಮಯದಲ್ಲಿ ಊಟ ದೊರೆಯಲಿದೆ ಎಂದು ಯೋಜನೆಯ ಕುರಿತಾಗಿ ಕೋಲ್ಕತ್ತಾ ಮಹಾನಗರ ಪಾಲಿಕೆ ಹಿರಿಯ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ಯೋಜನೆಗಾಗಿಯೇ ಬಜೆಟ್ನಲ್ಲಿ ಮೊತ್ತವನ್ನು ತೆಗೆದಿರಿಸಲಾಗಿದ್ದು ಕ್ರಮೇಣ ನಗರ, ಸಣ್ಣ ಪಟ್ಟಣ ಹಾಗೂ ಗ್ರಾಮಾಂತರ ಭಾಗಗಳ ಜನರನ್ನೂ ‘ಮಾ’ ತಲುಪಲಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಕೊವಿಡ್ 19 ಸಾಂಕ್ರಾಮಿಕದಿಂದ ಕೆಲಸ ಕಳೆದುಕೊಂಡ ವಲಸೆ ಕಾರ್ಮಿಕರಿಗೆಂದೇ ಟಿಎಂಸಿ ಪಕ್ಷವು ದೀದಿರ್ ರಾನಾಘರ್ (ದೀದಿಯ ಅಡುಗೆಕೋಣೆ) ಎಂಬ ಯೋಜನೆ ಜಾರಿಗೆ ತಂದಿತ್ತು. ಇನ್ನೊಂದೆಡೆ ಇದಕ್ಕೆ ಪ್ರತಿಯಾಗಿ ಸಿಪಿಐ(ಎಂ) ಪಕ್ಷವೂ ‘ಶ್ರಮಜೀವಿ ಕ್ಯಾಂಟಿನ್’ ಆರಂಭಿಸಿತ್ತು. ಜೊತೆಗೆ, ಸುಮಾರು 50 ಆರೋಗ್ಯ ಕೇಂದ್ರ ಆರಂಭಿಸಿ, ಸಂಕಷ್ಟದಲ್ಲಿರುವವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಗಮನ ಸೆಳೆದಿತ್ತು.
ಈ ಬಾರಿಯ ವಿಧಾನಸಭೆ ಚುನಾವಣೆ ಹಿಂದೆಂದಿಗಿಂತಲೂ ಹೆಚ್ಚು ಗಮನ ಸೆಳೆಯುತ್ತಿದ್ದು, 2019ರ ಲೋಕಸಭೆ ಚುನಾವಣೆ ಮೂಲಕ ಪಶ್ಚಿಮ ಬಂಗಾಳದಲ್ಲಿ ಕೊಂಚ ಬಲಪಡೆದಿರುವ ಬಿಜೆಪಿ ಪ್ರಸ್ತುತ ಆಡಳಿತರೂಢ ಟಿಎಂಸಿಗೆ ಅತಿದೊಡ್ಡ ಸವಾಲಾಗಿ ಪರಿಣಮಿಸಿದೆ. 294 ಸ್ಥಾನಗಳಲ್ಲಿ ಕನಿಷ್ಟ 200 ಸ್ಥಾನಗಳನ್ನಾದರೂ ಬಾಚಿಕೊಳ್ಳುವ ಉಮೇದಿಯಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕಲು ಟಿಎಂಸಿ ಪ್ರಯತ್ನಿಸುತ್ತಲೇ ಇದೆ. ಸದ್ಯ ಈ ಪ್ರಯತ್ನದ ಒಂದು ಭಾಗವೆಂಬಂತೆ ₹5ಕ್ಕೆ ಊಟ ನೀಡುವ ಯೋಜನೆ ಶುರುವಾಗಿದ್ದು, ಬಿಜೆಪಿ ಇದಕ್ಕೆ ಯಾವ ರೀತಿಯಲ್ಲಿ ತಿರುಗೇಟು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm