ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm