ಬ್ರೇಕಿಂಗ್ ನ್ಯೂಸ್
16-02-21 01:14 pm Headline Karnataka News Network ದೇಶ - ವಿದೇಶ
ಮುಂಬೈ, ಫೆ.16: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರ ಮುಂಬೈನಲ್ಲಿರುವ ಮನೆಗೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ದಿಢೀರ್ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಮುಂಬೈನ ಅಕ್ಸಾ ಬೀಚ್ ಬಳಿಯಿರುವ ಮಿಥುನ್ ಚಕ್ರವರ್ತಿಯವರ ಬಂಗಲೆಗೆ ಮೋಹನ್ ಭಾಗವತ್ ಭೇಟಿ ನೀಡಿದ್ದು, ಖಾಸಗಿಯಾಗಿ ಕೆಲಹೊತ್ತು ಚರ್ಚೆ ನಡೆಸಿದ್ದಾರೆ.
ಮಿಥುನ್ ಚಕ್ರವರ್ತಿ ಮೂಲತಃ ಬೆಂಗಾಲಿ ನಟನಾಗಿದ್ದು, ಪಶ್ಚಿಮ ಬಂಗಾಳದಲ್ಲಿ ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಚುನಾವಣೆ ಹಿನ್ನೆಲೆಯಲ್ಲಿ ಮಿಥುನ್ ಅವರನ್ನು ಬಿಜೆಪಿಗೆ ಸೆಳೆಯುವ ನಿಟ್ಟಿನಲ್ಲಿ ಅಥವಾ ಬಿಜೆಪಿ ಪರ ಪ್ರಚಾರಕ್ಕೆ ಕರೆತರುವ ಭಾಗವಾಗಿ ಮೋಹನ್ ಭಾಗ್ವತ್ ಚರ್ಚೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಮಿಥುನ್ ಚಕ್ರವರ್ತಿ ಈ ರೀತಿಯ ವದಂತಿಯನ್ನು ಅಲ್ಲಗಳೆದಿದ್ದಾರೆ. ನನಗೂ, ಮೋಹನ್ ಭಾಗ್ವತ್ ಅವರಿಗೂ ಆಧ್ಯಾತ್ಮಿಕ ಸಂಬಂಧ ಇದೆ. ಹೀಗಾಗಿ ಕಳೆದ ಬಾರಿ ನಾಗಪುರದಲ್ಲಿ ಅವರನ್ನು ಭೇಟಿಯಾಗಿದ್ದೆ. ನಾನು ಮುಂಬೈನಲ್ಲಿದ್ದಾಗ ಮನೆಗೆ ಬರುವಂತೆ ಆಹ್ವಾನ ನೀಡಿದ್ದೆ. ಹಾಗಾಗಿ ಬಂದಿದ್ದಾರೆ. ರಾಜಕೀಯ ಮಾತುಕತೆಗಳೇನು ನಡೆದಿಲ್ಲ ಎಂದು ಹೇಳಿದ್ದಾರೆ.
ಮಿಥುನ್ ಚಕ್ರವರ್ತಿ ರಾಜ್ಯಸಭೆಯ ಮಾಜಿ ಸದಸ್ಯರಾಗಿದ್ದು ಬಹುಕಾಲದಿಂದ ತೃಣಮೂಲ ಕಾಂಗ್ರೆಸ್ ಪಕ್ಷದ ಸದಸ್ಯರೂ ಆಗಿದ್ದರು. ಕಳೆದ 2016ರಲ್ಲಿ ಆರೋಗ್ಯ ಸಂಬಂಧೀ ಸಮಸ್ಯೆಗಳಿಂದಾಗಿ ಮಿಥುನ್, ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
RSS chief Mohan Bhagwat visited actor Mithun Chakraborty at his Mumbai residence on Tuesday. Mohan Bhagwat was at Mithun's bungalow in Madh area of Mumbai early morning.
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm