ಬ್ರೇಕಿಂಗ್ ನ್ಯೂಸ್
16-02-21 07:17 pm Headline Karnataka News Network ದೇಶ - ವಿದೇಶ
ಲಂಡನ್, ಫೆ.16: ಎನ್ನೆಂಸಿ ಹೆಲ್ತ್ ಕೇರ್ ಸಮೂಹ ಸಂಸ್ಥೆಗಳ ಸ್ಥಾಪಕ, ಉಡುಪಿ ಮೂಲದ ದುಬೈ ಉದ್ಯಮಿ ಬಿ.ಆರ್. ಶೆಟ್ಟಿಗೆ ಸೇರಿದ ಜಗತ್ತಿನಾದ್ಯಂತ ಇರುವ ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಲು ಲಂಡನ್ ಕೋರ್ಟ್ ಆದೇಶ ಮಾಡಿದೆ.
ಅಬುಧಾಬಿ ಕಮರ್ಷಿಯನ್ ಬ್ಯಾಂಕ್ ಒಂದಕ್ಕೇ ಒಂದು ಬಿಲಿಯನ್ ಡಾಲರ್ ಸಾಲ ಬಾಕಿ ಇರುವ ಕಾರಣ ಬ್ಯಾಂಕ್ ಆಡಳಿತ, ಶೆಟ್ಟಿ ಮತ್ತು ಅವರ ಸಂಸ್ಥೆಯ ವಿರುದ್ಧ ಕಳೆದ ಎಪ್ರಿಲ್ ನಲ್ಲಿ ಕ್ರಿಮಿನಲ್ ದೂರು ದಾಖಲಿಸಿತ್ತು. ಮಾಹಿತಿ ಪ್ರಕಾರ, ಬಿ.ಆರ್.ಶೆಟ್ಟಿ ಸೇರಿದಂತೆ ಎನ್ನೆಂಸಿಯ ವಹಿವಾಟು ನೋಡಿಕೊಂಡಿದ್ದ ಸಿಇಓ ಪ್ರಶಾಂತ್ ಮಂಗಟ್, ಪಾಲುದಾರಿಕೆ ಹೊಂದಿದ್ದ ದುಬೈನವರೇ ಆದ ಖಲೀಫಾ ಅಲ್ ಮುಹೈರಿ, ಸಯೀದ್ ಅಲ್ ಖೆಬೈಸಿ ಅವರ ಖಾತೆಗಳನ್ನೂ ಸೀಜ್ ಮಾಡಲು ಆದೇಶ ಮಾಡಲಾಗಿದೆ. ಇದರಂತೆ, ಇವರು ಜಗತ್ತಿನ ಯಾವುದೇ ಕಡೆಯಲ್ಲಿ ತಮ್ಮ ಹೆಸರಲ್ಲಿ ಹೊಂದಿರುವ ಸ್ಥಿರ ಆಸ್ತಿಗಳನ್ನು ಮಾರುವಂತಿಲ್ಲ.


1970ರಲ್ಲಿ ಬಿ.ಆರ್ ಶೆಟ್ಟಿ ದುಬೈನಲ್ಲಿ ಹೆಲ್ತ್ ಕೇರ್ ಸಂಸ್ಥೆ ಸ್ಥಾಪನೆ ಮಾಡಿದ್ದು, 50 ವರ್ಷಗಳಲ್ಲಿ ಯುಎಇಯಲ್ಲೇ ಅತಿ ದೊಡ್ಡ ಹೆಲ್ತ್ ಕೇರ್ ಸಂಸ್ಥೆಯಾಗಿ ಮಾರ್ಪಾಟಾಗಿತ್ತು. ಆದರೆ, ಬ್ಯಾಂಕುಗಳಿಗೆ ನಕಲಿ ಮಾಹಿತಿ ನೀಡಿ ಆಸ್ತಿಗೆ ಮೀರಿದ ಸಾಲ ಪಡೆದಿದ್ದ ಬಗ್ಗೆ ಲೆಕ್ಕ ಪರಿಶೋಧನಾ ಸಂಸ್ಥೆಯ ವರದಿ ಆಧಾರದಲ್ಲಿ ಇಡೀ ಸಂಸ್ಥೆಯೇ ದಿವಾಳಿಯಾಗಿತ್ತು. ಎನ್ನೆಂಸಿ ಸಂಸ್ಥೆಯ ಒಟ್ಟು ಸಾಲ 4.5 ಬಿಲಿಯನ್ ಡಾಲರ್ ಎಂದು ಲೆಕ್ಕ ಪರಿಶೋಧನಾ ಸಂಸ್ಥೆ ವರದಿ ನೀಡಿತ್ತು. ನಷ್ಟದ ಹಿನ್ನೆಲೆಯಲ್ಲಿ ಲಂಡನ್ ಮೂಲದ ಕಂಪನಿ, ಎನ್ನೆಂಸಿಯನ್ನು ವಶಕ್ಕೆ ಪಡೆದಿದ್ದು ಸಾಲದಾರರಿಗೆ ಹಣ ತುಂಬುವ ಭರವಸೆ ನೀಡಿದೆ.
ಈಗಾಗ್ಲೇ ದುಬೈ ಮತ್ತು ಭಾರತದಲ್ಲಿ ಇರುವ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡುವಂತೆ ಲಂಡನ್ ಕೋರ್ಟ್, ಈ ರಾಷ್ಟ್ರಗಳಿಗೆ ಕೇಳಿಕೊಂಡಿದೆ. ದುಬೈ ಅಲ್ಲದೆ, ಬಿ.ಆರ್. ಶೆಟ್ಟಿ ಭಾರತದ ಬರೋಡಾ ಬ್ಯಾಂಕ್, ಫೆಡರಲ್ ಬ್ಯಾಂಕಿನಲ್ಲೂ ಸಾಲ ಹೊಂದಿದ್ದಾರೆ. ಬರೋಡಾ ಬ್ಯಾಂಕಿನಲ್ಲಿ 250 ಮಿಲಿಯನ್ ಡಾಲರ್ ಸಾಲವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
The assets of BR Shetty, the founder of the troubled healthcare operator NMC Health, were frozen by a UK court. The freeze order reportedly applies worldwide, and was won by the Abu Dhabi Commercial Bank as its exposure to the company is more than $1 billion.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm