ಬ್ರೇಕಿಂಗ್ ನ್ಯೂಸ್
16-02-21 07:40 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.16: ಭಾರತ- ಚೀನಾ ಗಡಿಯಲ್ಲಿ ಕಳೆದ ಹತ್ತು ತಿಂಗಳಲ್ಲಿ ಉದ್ಭವ ಆಗಿದ್ದ ಉದ್ವಿಗ್ನ ಸ್ಥಿತಿ ಸಂಪೂರ್ಣ ಶಮನಗೊಳ್ಳುವ ಮುನ್ಸೂಚನೆ ಕಂಡುಬಂದಿದೆ. ಕಾಶ್ಮೀರದ ಪೂರ್ವ ಲಡಾಖ್ ಪ್ರಾಂತ್ಯದ 150 ಕಿಮೀ ಉದ್ದಕ್ಕೆ ನಿಯೋಜನೆಗೊಂಡಿದ್ದ ಚೀನಾ ಪಡೆಗಳು ದಿಢೀರ್ ಆಗಿ ಕಾಲು ಹಿಂದಕ್ಕೆ ಇಟ್ಟಿರುವುದನ್ನು ಭಾರತೀಯ ಸೇನಾ ಪಡೆ ದೃಢಪಡಿಸಿದೆ.
ಕಳೆದ ಎಪ್ರಿಲ್ ತಿಂಗಳಿಂದ ಬೀಡುಬಿಟ್ಟಿದ್ದ ಚೀನಾ ಸೇನಾ ಪಡೆ ಪಾಂಗೋಂಗ್ ತ್ಸೋ ನದಿಯ ಬದಿಯಿಂದ ಹಿಂದಕ್ಕೆ ಸರಿದಿದೆ. ಅಲ್ಲದೆ, ಅಲ್ಲಿ ರೆಡಿ ಮಾಡಿದ್ದ ಹೆಲಿಪ್ಯಾಡ್, ಯುದ್ಧ ಟ್ಯಾಂಕರ್ ಗಳು, ಜೆಟ್ಟಿ, ಟೆಂಟ್ ಗಳನ್ನು ತೆರವು ಮಾಡಿದ್ದು, ಫಿಂಗರ್ ಪಾಯಿಂಟ್ 4 ಮತ್ತು 5ರಲ್ಲಿ ಸೇನಾ ಪಡೆಯನ್ನು ತೆರವು ಮಾಡಲಾಗಿದೆ.
ಪಾಂಗೊಂಗ್ ಸರೋವರದ 134 ಕಿಮೀ ಉದ್ದಕ್ಕೂ ಚೀನಾ ಪಡೆ ನಿಯೋಜನೆಗೊಂಡಿತ್ತು. ಎಂಟು ಗಂಟೆಗಳ ಅವಧಿಯಲ್ಲಿ ನಿರೀಕ್ಷೆಗೂ ಮೀರಿ ಚೀನಾ ಪಡೆ ತನ್ನ ಜಾಗ ತೆರವು ಮಾಡಿದೆ ಎಂದು ಅಧಿಕಾರಿಯೊಬ್ಬರು ನ್ಯೂಸ್ 18 ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಕಳೆದ ವಾರ ಚೀನಾ- ಭಾರತ ನಡುವೆ ಏರ್ಪಟ್ಟ ಸಂಧಾನದ ಫಲವಾಗಿ ಚೀನಾ ತನ್ನ ಸೇನೆಯನ್ನು ಹಿಂದಕ್ಕೆ ಪಡೆದಿದೆದ ಎನ್ನಲಾಗುತ್ತಿದೆ. ಕಳೆದ ಹತ್ತು ತಿಂಗಳಲ್ಲಿ ಗಡಿಭಾಗದಲ್ಲಿ ಮಾಡಿಕೊಂಡಿದ್ದ ಟೆಂಟ್, ಇನ್ನಿತರ ತಾತ್ಕಾಲಿಕ ಕಟ್ಟಡಗಳನ್ನು ತೆರವು ಮಾಡಲಾಗುತ್ತಿದೆ. ಲಾರಿಗಳಲ್ಲಿ ತುಂಬಿಸಿ ಹಿಂದಕ್ಕೆ ಒಯ್ಯುತ್ತಿರುವ ಫೋಟೋಗಳು ಲಭ್ಯವಾಗಿದೆ. ಕ್ರೇನ್ ಮೂಲಕ ಶಸ್ತ್ರಾಸ್ತ್ರಗಳನ್ನು ಕಂಟೇನರ್ ಲಾರಿಗಳಿಗೆ ತುಂಬಿಸುವುದು ಕಂಡುಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಉಭಯ ರಾಷ್ಟ್ರಗಳ ಮಾತುಕತೆ ಪ್ರಕಾರ, ಚೀನಾ ಸೇನೆ ಫಿಂಗರ್ ಪಾಯಿಂಟ್ 8ಕ್ಕೆ ಹಿಂದಿರುಗಬೇಕಿದ್ದರೆ, ಭಾರತದ ಸೇನೆ ಫಿಂಗರ್ ಪಾಯಿಂಟ್ 3ಕ್ಕೆ ಹಿಂದೆ ಬರಬೇಕಿದೆ. ಫೆ.10ರಂದು ಈ ಬಗ್ಗೆ ಒಪ್ಪಂದ ಏರ್ಪಟ್ಟಿದ್ದು, ಅದರಂತೆ ಎರಡೂ ಕಡೆಗಳಲ್ಲಿ ನಿಯೋಜನೆಗೊಂಡಿದ್ದ 100ಕ್ಕೂ ಹೆಚ್ಚು ಯುದ್ಧ ಟ್ಯಾಂಕರ್ ಗಳನ್ನು ಹಿಂದಕ್ಕೆ ಕರೆಸಲಾಗುತ್ತಿದೆ. ಪರ್ವತ ಶಿಖರಗಳ ಪ್ರದೇಶ ಮಾನವ ರಹಿತವಾಗಿದ್ದು, ಅಲ್ಲೀಗ ರಾಡಾರ್ ಮತ್ತು ಡ್ರೋಣ್ ಮೂಲಕ ನಿಗಾ ವಹಿಸಲಾಗುತ್ತಿದೆ ಎಂದು ಸೇನಾಧಿಕಾರಿ ಮಾಹಿತಿ ನೀಡಿದ್ದಾರೆ.
Indian and Chinese tanks were seen disengaging from the south bank of Pangong lake area in eastern Ladakh where they were deployed amid a standoff areas along the Line of Actual Control.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm