ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am