ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm