ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am