ಬ್ರೇಕಿಂಗ್ ನ್ಯೂಸ್
31-07-20 02:39 pm Headline Karnataka News Network ದೇಶ - ವಿದೇಶ
ಅಮರಾವತಿ (ಜು. 31): ಆಲ್ಕೋಹಾಲ್ ಸಿಗಲಿಲ್ಲ ಎಂಬ ಕಾರಣಕ್ಕೆ ಸ್ಯಾನಿಟೈಸರ್ ಸೇವಿಸಿ ಮೂವರು ಭಿಕ್ಷುಕರು ಸೇರಿ ಒಟ್ಟು 10 ಜನ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕುರಿಚೇಡು ಮಂಡಲ ಹೆಡ್ ಕ್ವಾರ್ಟರ್ ಟೌನ್ನ ಕೆಲವರು ಮೂರ್ನಾಲ್ಕು ದಿನಗಳಿಂದ ಸ್ಯಾನಿಟೈಸರ್ ಸೇವಿಸುತ್ತಿದ್ದರು. ಆಲ್ಕೋಹಾಲ್ ಸಿಗದ ಕಾರಣ ನೀರಿಗೆ ಮತ್ತು ಕೂಲ್ಡ್ರಿಂಕ್ಸ್ಗೆ ಸ್ಯಾನಿಟೈಸರ್ ಸೇರಿಸಿಕೊಂಡು ಕುಡಿಯುತ್ತಿದ್ದರು. ಸ್ಯಾನಿಟೈಸರ್ನಲ್ಲಿ ಆಲ್ಕೋಹಾಲ್ ಅಂಶ ಇರುವುದರಿಂದ ಈ ರೀತಿ ಮಿಕ್ಸ್ ಮಾಡಿಕೊಂಡು ಕುಡಿಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಗ್ರಾಮದಲ್ಲಿ ಕೆಲವು ದಿನಗಳಿಂದ ಅಸಹಕ ರೀತಿಯಲ್ಲಿ ಜನರು ಸಾಯುತ್ತಿದ್ದರು. ಸಾವಿನ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಪೊಲೀಸರಿಗೆ ಅನುಮಾನ ಶುರುವಾಗಿತ್ತು. ಇಂದು ಬೆಳಿಗ್ಗೆ ಮತ್ತೆ 7 ಜನರು ಸಾವನ್ನಪ್ಪಿದ್ದರು. ಇದಕ್ಕೂ ಮೊದಲು ನಿನ್ನೆ ರಾತ್ರಿ ಕುರಿಚೇಡು ಪೊಲೇರಮ್ಮ ದೇವಾಲಯದ ಬಳಿ ಇದ್ದ ಭಿಕ್ಷುಕ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿದ್ದ. ಅದೇ ಏರಿಯಾದ ಮತ್ತೋರ್ವ ಭಿಕ್ಷುಕ ಕೂಡ ಇದೇ ರೀತಿ ಕುಸಿದುಬಿದ್ದಿದ್ದ. ಸುತ್ತಮುತ್ತಲಿನವರು ಆತನನ್ನು ಆ್ಯಂಬುಲೆನ್ಸ್ನಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲು ನೋಡಿದರೂ ದಾರಿಯಲ್ಲೇ ಸಾವನ್ನಪ್ಪಿದ್ದ.
ಅಲ್ಲದೆ, ಕುರಿಚೇಡಿನ 7 ಜನರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಗ್ಗೆ ಅವರೆಲ್ಲರೂ ಸಾವನ್ನಪ್ಪಿದ್ದಾರೆ. ಕುರಿಚೇಡು ಗ್ರಾಮ ಕಂಟೇನ್ಮೆಂಟ್ ಜೋನ್ ಆಗಿರುವುದರಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿತ್ತು. ಹೀಗಾಗಿ, ಮದ್ಯಪ್ರಿಯರು ಸ್ಯಾನಿಟೈಸರ್ ಅನ್ನು ನೀರು ಹಾಗೂ ಕೂಲ್ಡ್ರಿಂಕ್ಸ್ ಜೊತೆ ಮಿಕ್ಸ್ ಮಾಡಿಕೊಂಡು ಕುಡಿದಿದ್ದರು. ಈ ಘಟನೆ ನಡೆದ ಸ್ಥಳದಲ್ಲಿ ಸ್ಯಾನಿಟೈಸರ್ ಬಾಟಲಿಗಳು ಕೂಡ ಪತ್ತೆಯಾಗಿವೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm