ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
01-01-26 06:21 pm
Bangalore Correspondent
ಜನವರಿ 15ರ ನಂತರ ಸಂಪುಟ ವಿಸ್ತರಣೆ ಆಗಲಿದೆ, ನನಗೂ ಮಂ...
01-01-26 05:18 pm
ಬೆಂಗಳೂರಿನಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ; 70ರ...
01-01-26 03:05 pm
ಕೋಗಿಲು ಬಡಾವಣೆ ವಿವಾದ ; ಬಿಜೆಪಿಯಿಂದ ಸತ್ಯಶೋಧನಾ ಸಮ...
31-12-25 10:57 pm
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
01-01-26 09:34 pm
HK News Desk
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
01-01-26 08:25 pm
Mangalore Correspondent
ಕಾರು ಬಾಡಿಗೆ ನೆಪದಲ್ಲಿ ಸುಳ್ಯದಿಂದ ಯುವಕನ ಕರೆದೊಯ್ದ...
31-12-25 07:05 pm
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm