ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm