ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm