ಬ್ರೇಕಿಂಗ್ ನ್ಯೂಸ್
23-02-21 12:26 pm Headline Karnataka News Network ದೇಶ - ವಿದೇಶ
ಭೋಪಾಲ್, ಫೆ.23: ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್ನ ತಲವಾಲಿ ಚಾಂದ್ ಬಳಿ ನಡೆದಿದೆ.
ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ನಡೆದಿರುವುದಾಗಿ ಅಂದಾಜಿಸಲಾಗಿದ್ದು, ವೇಗವಾಗಿ ಚಲಿಸುತ್ತಿದ್ದ ಕಾರು ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಂತಿದ್ದ ತೈಲ ಸಾಗಣೆ ಟ್ಯಾಂಕರ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 6 ಜನ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತರಾಗಿದ್ದಾರೆ.
ಮೃತ ಯುವಕರೆಲ್ಲರೂ ಇಂದೋರ್ನ ನಿವಾಸಿಗಳಾಗಿದ್ದು, 18 ರಿಂದ 28 ವರ್ಷ ಪ್ರಾಯದವರೆಂದು ತಿಳಿದುಬಂದಿದೆ. ಈ ಯುವಕರ ತಂಡವು ಇಂದೋರ್ನ ಹೊರ ಪ್ರಾಂತ್ಯದಲ್ಲಿರುವ ಮಾಂಗ್ಲಿಯಾದಿಂದ ತಮ್ಮ ನಗರಕ್ಕೆ ಮರಳುತ್ತಿದ್ದರು ಎಂದು ಲಸುದಿಯ ಪೊಲೀಸ್ ಠಾಣೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದು, ಮೃತರನ್ನು ರಿಶಿ ಪವಾರ್, ಸೂರಜ್, ಚಂದ್ರಭಾನ್ ರಘುವಂಶಿ, ಸೋನು ಜತ್, ಸುಮಿತ್ ಸಿಂಗ್ ಮತ್ತು ದೇವ್ ಎಂದು ಗುರುತಿಸಲಾಗಿದೆ.
ಅಪಘಾತವು ನಸುಕಿನ ವೇಳೆಯಲ್ಲಿ ನಡೆದಿರುವುದರಿಂದ ಚಾಲಕನಿಗೆ ನಿದ್ರೆ ಮಂಪರು ಆವರಿಸಿರುವುದು ಕಾರಣವಾಗಿರಬಹುದು ಎಂದು ಅನುಮಾನಿಸಲಾಗಿದೆ. ಜೊತೆಗೆ, ಅತಿಯಾದ ವೇಗ ಮತ್ತು ಅಜಾಗರೂಕತೆಯೂ ಅಪಘಾತಕ್ಕೆ ದಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿರುವರಾದರೂ ಬದುಕಿ ಬಾಳಬೇಕಿದ್ದ ಆರು ಯುವಕರು ಹೀಗೆ ರಸ್ತೆ ಅಪಘಾತದಲ್ಲಿ ಅಕಾಲಿಕ ಮರಣ ಹೊಂದಿರುವುದು ಅತ್ಯಂತ ಖೇದಕರ ಸಂಗತಿ.
After a Car ramed a parked tanker truck six students in car died on spot in Bhopal, Indore.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm