ಬ್ರೇಕಿಂಗ್ ನ್ಯೂಸ್
17-08-20 09:08 pm Headline Karnataka News Network ದೇಶ - ವಿದೇಶ
ವಿಶ್ವದ ಪ್ರಮುಖ ಭಾರತೀಯ ಶಾಸ್ತ್ರೀಯ ಗಾಯಕರಲ್ಲಿ ಒಬ್ಬರಾದ ಪಂಡಿತ್ ಜಸರಾಜ್ (90) ಅವರು ಅಮೆರಿಕದ ನ್ಯೂಜೆರ್ಸಿಯಲ್ಲಿ ಇಂದು ನಿಧನರಾಗಿದ್ದಾರೆ.
1930 ರಲ್ಲಿ ಹರಿಯಾಣದಲ್ಲಿ ಜನಿಸಿದ ಅವರ ಸಂಗೀತ ವೃತ್ತಿಜೀವನವು ಕಳೆದ ಎಂಟು ದಶಕಗಳವರೆಗೆ ವ್ಯಾಪಿಸಿತ್ತು. 2000 ನೇ ಇಸವಿಯಲ್ಲಿ ಇವರಿಗೆ ಭಾರತದ ಎರಡನೇ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣ ನೀಡಲಾಗಿತ್ತು.
ಇಂದು ಈ ಮಹಾನ್ ಸಂಗೀತ ಮಾಂತ್ರಿಕ ನಮ್ಮ ನಡುವೆ ಇಲ್ಲದೇ ಇದ್ದರೂ ಅವರ ನೆನಪುಗಳು ಮಾತ್ರ ಅಚ್ಚಳಿಯದೇ ಉಳಿಯಲಿದೆ. ತಮ್ಮ 80 ವರ್ಷಗಳ ಸಂಗೀತ ಜೀವನದಲ್ಲಿ ಹಲವು ಮೈಲುಗಳನ್ನು ದಾಟಿದ ಸಾಧನೆ ಇವರದ್ದು.
7ಖಂಡಗಳಲ್ಲಿ ಕಾರ್ಯಕ್ರಮ ನೀಡಿದ ಹೆಗ್ಗಳಿಕೆ ಹೊಂದಿರುವ ಇವರು, ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾದಿಂದಲೂ ಗೌರವ ಪಡೆದವರು. ಇವರ ಸಂಗೀತ ಸಾಧನೆಗಳಿಗೆ ಇವರೇ ಸರಿಸಾಟಿ.
ಹರಿರ್ಯಾಣದ ಹಿಸಾರ್ನಲ್ಲಿ 1930ರ ಜನವರಿ 28ರಂದು ಜನಿಸಿದ ಪಂಡಿತ್ ಜಸರಾಜ್ ಅವರು 4 ತಲೆಮಾರುಗಳಿಂದ ಶಾಸ್ತ್ರೀಯ ಸಂಗೀತದ ಸಂಪ್ರದಾಯವನ್ನು ಮುಂದುವರೆಸುತ್ತಿರುವ ಕುಟುಂಬಕ್ಕೆ ಸೇರಿದರಾಗಿದ್ದಾರೆ. ಖಯಾಲ್ ಶೈಲಿಯ ಗಾಯನವು ಪಂಡಿತ್ ಜಸ್ರಾಜ್ ಅವರ ವಿಶೇಷತೆಯಾಗಿತ್ತು. ಅವರ ತಂದೆ ಪಂಡಿತ್ ಮೋತಿರಾಮ್ ಅವರು ಖ್ಯಾತ ಮೇವತಿ ಘರಾನಾದ ಸಂಗೀತಗಾರರಾಗಿದ್ದರು.
ಪಂಡಿತ್ ಜಸ್ರಾಜ್ ಕೇವಲ ಮೂರರಿಂದ ನಾಲ್ಕು ವರ್ಷದವರಿದ್ದಾಗ ತಂದೆಯನ್ನು ಕಳೆದುಕೊಂಡರು. ತಂದೆಯಂತೆ ಇವರಿಗೂ ಸಂಗೀತದ ಆಸಕ್ತಿ ಮೂಡಿತ್ತು. ಎಳೆಯ ಪ್ರಾಯದಲ್ಲೇ ಸಂಗೀತವನ್ನು ಸೃಜಿಸಿಕೊಂಡ ಇವರು, ತಮ್ಮ 14ನೇ ವಯಸ್ಸಿನ ವರೆಗೆ ತಬಲಾ ಕಲಿಯುತ್ತಿದ್ದರು. ಬಳಿಕ ಕಂಠಸಿರಿಯತ್ತ ಚಿತ್ತ ಹರಿದ ಕಾರಣಕ್ಕೆ ಹಾಡುಗಾರಿಕೆಯನ್ನು ಪ್ರಾರಂಭಿಸಿದರು. ಮೂವತ್ತು ವಾರಗಳ ವರೆಗೆ ಶುದ್ಧ ಉಚ್ಚಾರಣೆ ಮತ್ತು ಸ್ಪಷ್ಟತೆಯನ್ನು ಇಟ್ಟುಕೊಂಡು ಮೇವತಿ ಘರಾನಾದ ವಿಶಿಷ್ಟತೆಯನ್ನು ಅವರು ಮುಂದಿನ ತಲೆಮಾರಿಗೆ ದಾಟಿಸುವಲ್ಲಿ ಯಶಸ್ವಿಯಾದರು.
ಭಾರತದಲ್ಲಿ ಕೊರೋನಾ ವೈರಸ್ ಲಾಕ್ಡೌನ್ ಜಾರಿಗೊಳಿಸಿದ್ದಾಗ ಮೇವತಿ ಘರಾನಾ ಸಂಗೀತ ವಂಶಾವಳಿಗೆ ಸೇರಿದ್ದ ಪಂಡಿತ್ ಜಸರಾಜ್ ಅಮೆರಿಕದಲ್ಲಿದ್ದರು. ಹೀಗಾಗಿ ಅವರು ಭಾರತಕ್ಕೆ ಹಿಂದಿರುಗಲು ಸಾಧ್ಯವಾಗದೆ ಅಲ್ಲೇ ಉಳಿಯಲು ನಿರ್ಧರಿಸಿದ್ದರು.
ಆದರೆ, ಅಮೆರಿಕದ ನ್ಯೂಜೆರ್ಸಿಯಲ್ಲಿರುವ ಅವರ ಮನೆಯಲ್ಲಿ ಇಂದು ಹೃದಯಾಘಾತಕ್ಕೆ ಒಳಗಾಗಿ ಅಮೆರಿಕ ಕಾಲಮಾನದ ಪ್ರಕಾರ ಇಂದು ಬೆಳಗ್ಗೆ 5.15ಕ್ಕೆ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಕುಟುಂಬ ವರ್ಗ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
The unfortunate demise of Pandit Jasraj Ji leaves a deep void in the Indian cultural sphere. Not only were his renditions outstanding, he also made a mark as an exceptional mentor to several other vocalists. Condolences to his family and admirers worldwide. Om Shanti. pic.twitter.com/6bIgIoTOYB
— Narendra Modi (@narendramodi) August 17, 2020
19-11-25 02:16 pm
Bangalore Correspondent
ಸ್ತ್ರೀ ವೇಷಧಾರಿಗಳು ಸಹಕರಿಸದಿದ್ದರೆ ಮರುದಿನ ಮೇಳದಿಂ...
19-11-25 12:20 pm
Deputy CM D.K. Shivakumar: ರಾಜ್ಯದ ಐದು ಕಡೆಗಳಲ್...
17-11-25 07:25 pm
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
19-11-25 06:47 pm
HK News Desk
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
19-11-25 07:28 pm
Mangalore Correspondent
Mangalore, Sbi General Insurance, Consumer Co...
19-11-25 01:01 pm
ಅಡ್ಯಾರ್ ಕಣ್ಣೂರಿನಲ್ಲಿ ಮಂಗಳೂರಿಗೆ ನೀರು ಪೂರೈಸುವ ಪ...
18-11-25 10:18 pm
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
19-11-25 06:07 pm
Bangalore Correspondent
ಕೆಂಪುಕೋಟೆ ಕಾರು ಸ್ಫೋಟಕ್ಕೆ ಉಮರ್ ಶೂನಲ್ಲಿತ್ತು ಟ್ರ...
18-11-25 09:09 pm
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm