ಬ್ರೇಕಿಂಗ್ ನ್ಯೂಸ್
24-02-21 01:10 pm Headline Karnataka News Network ದೇಶ - ವಿದೇಶ
ದೆಹಲಿ, ಫೆ.24 : ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ ರೈತ ಹೋರಾಟಗಾರರು ಪಾರ್ಲಿಮೆಂಟ್ಗೆ ಘೇರಾವ್ ಹಾಕುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
‘ದೆಹಲಿ ಮಾರ್ಚ್ಗೆ’ ಯಾವಾಗಲಾದರೂ ಕರೆ ನೀಡಬಹುದು. ರೈತರು ತಯಾರಾಗಿರಬೇಕು ಎಂದು ಟಿಕಾಯತ್ ಹೇಳಿದ್ದಾರೆ. ರಾಜಸ್ಥಾನದ ಸಿಕರ್ ಎಂಬಲ್ಲಿ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಂಗಳವಾರ ರಾಕೇಶ್ ಟಿಕಾಯತ್ ಮಾತನಾಡಿದ್ದಾರೆ.

ಈ ಬಾರಿ ಪಾರ್ಲಿಮೆಂಟ್ ಘೇರಾವ್ಗೆ ಕರೆ ನೀಡಲಾಗುವುದು. ದೆಹಲಿ ಪಾದಯಾತ್ರೆ ಮಾಡಲಾಗುವುದು. ನಾಲ್ಕು ಲಕ್ಷ ಟ್ರ್ಯಾಕ್ಟರ್ಗಳ ಬದಲಾಗಿ 40 ಲಕ್ಷ ಟ್ರ್ಯಾಕ್ಟರ್ ಚಳುವಳಿ ನಡೆಸಲಾಗುತ್ತದೆ ಎಂದು ಕಿಸಾನ್ ಮಹಾಪಂಚಾಯತ್ನಲ್ಲಿ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.
ಇಂಡಿಯಾ ಗೇಟ್ ಬಳಿಯ ಪಾರ್ಕ್ನಲ್ಲಿ ನೇಗಿಲು ಹಿಡಿದು ನೆಲ ಉತ್ತು, ಬೆಳೆ ಬೆಳೆಯುತ್ತೇವೆ. ಯುನೈಟೆಡ್ ಫ್ರಂಟ್ನ ರೈತ ಚಳುವಳಿಗಾರರು ಪಾರ್ಲಿಮೆಂಟ್ ಘೆರಾವ್ಗೆ ದಿನಾಂಕ ನಿಗದಿ ಮಾಡುತ್ತಾರೆ ಎಂದು ಟಿಕಾಯತ್ ತಿಳಿಸಿದ್ದಾರೆ.
ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಚಳುವಳಿಗೆ ಕೆಟ್ಟ ಹೆಸರು ತರುವಂತೆ ಷಡ್ಯಂತ್ರ ಹೂಡಲಾಗಿದೆ. ಜನವರಿ 26ರ ಹಿಂಸಾಚಾರವನ್ನು ರೈತರ ಮೇಲೆ ಹೊರಿಸಲಾಗುತ್ತಿದೆ. ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ರೈತರು ರಾಜಕೀಯ ನಾಯಕರಂತಲ್ಲ ಎಂದು ಟಿಕಾಯತ್ ಗುಡುಗಿದ್ದಾರೆ.


ಕೇಂದ್ರ ಸರ್ಕಾರ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ನೀಡಲೇಬೇಕು. ನೂತನ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ, ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಭರವಸೆ ನೀಡದೇ ಹೋದರೆ, ದೊಡ್ಡ ದೊಡ್ಡ ಕಂಪೆನಿಗಳ ಗೋದಾಮುಗಳನ್ನು ನಾಶಪಡಿಸುವುದಾಗಿ ಟಿಕಾಯತ್ ಎಚ್ಚರಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ನಲ್ಲಿ ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್, ಆಲ್ ಇಂಡಿಯಾ ಕಿಸಾನ್ ಸಭಾ ಉಪಾಧ್ಯಕ್ಷ ಆಮ್ರಾ ರಾಮ್, ಕಿಸಾನ್ ಯೂನಿಯನ್ ಮುಖ್ಯ ಕಾರ್ಯದರ್ಶಿ ಚೌಧರಿ ಯುಧ್ವೀರ್ ಸಿಂಗ್ ಹಾಗೂ ಇತರರು ಭಾಗವಹಿಸಿದ್ದಾರೆ.

ಪಂಜಾಬ್, ಹರ್ಯಾಣ ಹಾಗೂ ಪಶ್ಚಿಮ ಉತ್ತರ ಪ್ರದೇಶ ಭಾಗದ ಸಾವಿರಾರು ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಿಂಘು, ಟಿಕ್ರಿ ಹಾಗೂ ಘಾಜಿಪುರ್ ಭಾಗಗಳಲ್ಲಿ ಕಳೆದ 90 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಖಚಿತತೆ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.
Farmer leader Rakesh Tikait said on Tuesday that if the Centre does not repeal the three new agriculture laws, the protesting farmers will gherao Parliament. He appealed to farmers to be ready as the call for 'Delhi march' can be given at any time.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm