ಬ್ರೇಕಿಂಗ್ ನ್ಯೂಸ್
24-02-21 01:10 pm Headline Karnataka News Network ದೇಶ - ವಿದೇಶ
ದೆಹಲಿ, ಫೆ.24 : ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ ರೈತ ಹೋರಾಟಗಾರರು ಪಾರ್ಲಿಮೆಂಟ್ಗೆ ಘೇರಾವ್ ಹಾಕುವುದಾಗಿ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
‘ದೆಹಲಿ ಮಾರ್ಚ್ಗೆ’ ಯಾವಾಗಲಾದರೂ ಕರೆ ನೀಡಬಹುದು. ರೈತರು ತಯಾರಾಗಿರಬೇಕು ಎಂದು ಟಿಕಾಯತ್ ಹೇಳಿದ್ದಾರೆ. ರಾಜಸ್ಥಾನದ ಸಿಕರ್ ಎಂಬಲ್ಲಿ ಕಿಸಾನ್ ಮಹಾಪಂಚಾಯತ್ ಉದ್ದೇಶಿಸಿ ಮಂಗಳವಾರ ರಾಕೇಶ್ ಟಿಕಾಯತ್ ಮಾತನಾಡಿದ್ದಾರೆ.

ಈ ಬಾರಿ ಪಾರ್ಲಿಮೆಂಟ್ ಘೇರಾವ್ಗೆ ಕರೆ ನೀಡಲಾಗುವುದು. ದೆಹಲಿ ಪಾದಯಾತ್ರೆ ಮಾಡಲಾಗುವುದು. ನಾಲ್ಕು ಲಕ್ಷ ಟ್ರ್ಯಾಕ್ಟರ್ಗಳ ಬದಲಾಗಿ 40 ಲಕ್ಷ ಟ್ರ್ಯಾಕ್ಟರ್ ಚಳುವಳಿ ನಡೆಸಲಾಗುತ್ತದೆ ಎಂದು ಕಿಸಾನ್ ಮಹಾಪಂಚಾಯತ್ನಲ್ಲಿ ಟಿಕಾಯತ್ ವಾಗ್ದಾಳಿ ನಡೆಸಿದ್ದಾರೆ.
ಇಂಡಿಯಾ ಗೇಟ್ ಬಳಿಯ ಪಾರ್ಕ್ನಲ್ಲಿ ನೇಗಿಲು ಹಿಡಿದು ನೆಲ ಉತ್ತು, ಬೆಳೆ ಬೆಳೆಯುತ್ತೇವೆ. ಯುನೈಟೆಡ್ ಫ್ರಂಟ್ನ ರೈತ ಚಳುವಳಿಗಾರರು ಪಾರ್ಲಿಮೆಂಟ್ ಘೆರಾವ್ಗೆ ದಿನಾಂಕ ನಿಗದಿ ಮಾಡುತ್ತಾರೆ ಎಂದು ಟಿಕಾಯತ್ ತಿಳಿಸಿದ್ದಾರೆ.
ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ಜನವರಿ 26ರಂದು ನಡೆದ ಟ್ರ್ಯಾಕ್ಟರ್ ಚಳುವಳಿಗೆ ಕೆಟ್ಟ ಹೆಸರು ತರುವಂತೆ ಷಡ್ಯಂತ್ರ ಹೂಡಲಾಗಿದೆ. ಜನವರಿ 26ರ ಹಿಂಸಾಚಾರವನ್ನು ರೈತರ ಮೇಲೆ ಹೊರಿಸಲಾಗುತ್ತಿದೆ. ಭಾರತದ ತ್ರಿವರ್ಣ ಧ್ವಜವನ್ನು ರೈತರು ಬಹಳ ಪ್ರೀತಿಸುತ್ತಾರೆ. ರೈತರು ರಾಜಕೀಯ ನಾಯಕರಂತಲ್ಲ ಎಂದು ಟಿಕಾಯತ್ ಗುಡುಗಿದ್ದಾರೆ.


ಕೇಂದ್ರ ಸರ್ಕಾರ ನೂತನ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಲೇಬೇಕು. ಕನಿಷ್ಠ ಬೆಂಬಲ ಬೆಲೆಯನ್ನು ನೀಡಲೇಬೇಕು. ನೂತನ ಕಾಯ್ದೆಗಳನ್ನು ಹಿಂಪಡೆಯದೇ ಹೋದರೆ, ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಭರವಸೆ ನೀಡದೇ ಹೋದರೆ, ದೊಡ್ಡ ದೊಡ್ಡ ಕಂಪೆನಿಗಳ ಗೋದಾಮುಗಳನ್ನು ನಾಶಪಡಿಸುವುದಾಗಿ ಟಿಕಾಯತ್ ಎಚ್ಚರಿಸಿದ್ದಾರೆ.
ಕಿಸಾನ್ ಮಹಾಪಂಚಾಯತ್ನಲ್ಲಿ ಸ್ವರಾಜ್ ಪಕ್ಷದ ನಾಯಕ ಯೋಗೇಂದ್ರ ಯಾದವ್, ಆಲ್ ಇಂಡಿಯಾ ಕಿಸಾನ್ ಸಭಾ ಉಪಾಧ್ಯಕ್ಷ ಆಮ್ರಾ ರಾಮ್, ಕಿಸಾನ್ ಯೂನಿಯನ್ ಮುಖ್ಯ ಕಾರ್ಯದರ್ಶಿ ಚೌಧರಿ ಯುಧ್ವೀರ್ ಸಿಂಗ್ ಹಾಗೂ ಇತರರು ಭಾಗವಹಿಸಿದ್ದಾರೆ.

ಪಂಜಾಬ್, ಹರ್ಯಾಣ ಹಾಗೂ ಪಶ್ಚಿಮ ಉತ್ತರ ಪ್ರದೇಶ ಭಾಗದ ಸಾವಿರಾರು ರೈತರು ದೆಹಲಿ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಮುಂದುವರಿಸಿದ್ದಾರೆ. ಸಿಂಘು, ಟಿಕ್ರಿ ಹಾಗೂ ಘಾಜಿಪುರ್ ಭಾಗಗಳಲ್ಲಿ ಕಳೆದ 90 ದಿನಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯಬೇಕು. ಕನಿಷ್ಠ ಬೆಂಬಲ ಬೆಲೆ ನೀಡುವ ಬಗ್ಗೆ ಖಚಿತತೆ ನೀಡಬೇಕು ಎಂಬುದು ರೈತರ ಬೇಡಿಕೆಯಾಗಿದೆ.
Farmer leader Rakesh Tikait said on Tuesday that if the Centre does not repeal the three new agriculture laws, the protesting farmers will gherao Parliament. He appealed to farmers to be ready as the call for 'Delhi march' can be given at any time.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
ಸಾಕ್ಷಿಗಳು ಬರ್ತಾರೆ, ಹೋಗ್ತಾರೆ.. ಧರ್ಮಸ್ಥಳದಲ್ಲಿ ಹ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm