ಬ್ರೇಕಿಂಗ್ ನ್ಯೂಸ್
25-02-21 09:58 am Headline Karnataka News Network ದೇಶ - ವಿದೇಶ
ಆಲಪ್ಪುಝ, ಫೆ.25: ಎಸ್ಡಿಪಿಐ ಮತ್ತು ಆರೆಸ್ಸೆಸ್ ಕಾರ್ಯಕರ್ತರ ನಡುವೆ ಘರ್ಷಣೆ ನಡೆದು ಆರೆಸ್ಸೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆಗೈದ ಘಟನೆ ಇಲ್ಲಿನ ವಯಲಾರ್ ಪಂಚಾಯತ್ ವ್ಯಾಪ್ತಿಯ ನಾಗಂಕುಲರ ಎಂಬಲ್ಲಿ ನಡೆದಿದೆ.
ಆರೆಸ್ಸೆಸ್ ಶಾಖಾ ಮುಖ್ಯ ಶಿಕ್ಷಕ್ ಆಗಿದ್ದ ನಂದು ಯಾನೆ ರಾಹುಲ್ ಕೃಷ್ಣ (22) ಕೊಲೆಯಾದ ಯುವಕ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇರಳ ಭೇಟಿಯನ್ನು ವಿರೋಧಿಸಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲು ಎಸ್ಡಿಪಿಐ ಮುಂದಾಗಿತ್ತು. ಈ ಸಂಬಂಧ ವಾರದ ಹಿಂದೆ ಎಸ್ಡಿಪಿಐ ಕಾರ್ಯಕರ್ತರು ಸೇರಿ ವಯಲಾರ್ ನಲ್ಲಿ ಸಭೆ ನಡೆಸಿದ್ದರು. ಕಳೆದ ಭಾನುವಾರ ಯೋಗಿ ಆದಿತ್ಯನಾಥ್, ಕಾಸರಗೋಡಿಗೆ ಆಗಮಿಸಿ ಬಿಜೆಪಿ ಹಮ್ಮಿಕೊಂಡಿದ್ದ ವಿಜಯ ಯಾತ್ರೆಗೆ ಚಾಲನೆ ನೀಡಿದ್ದರು. ಇದನ್ನು ವಿರೋಧಿಸಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಘೋಷಣೆ ಕೂಗಿದ್ದರು.
ಬುಧವಾರ ಮತ್ತೆ ಆಲಪ್ಪುಝ ಜಿಲ್ಲೆಯ ವಯಲಾರ್ ಪ್ರದೇಶದಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮಾರ್ಚ್ ನಡೆಸಿದ್ದಲ್ಲದೆ, ಬಿಜೆಪಿ ಮತ್ತು ಆರೆಸ್ಸೆಸ್ ವಿರುದ್ಧ ಅವಾಚ್ಯವಾಗಿ ನಿಂದಿಸುತ್ತಾ ಘೋಷಣೆ ಕೂಗಿದ್ದು ಆರೆಸ್ಸೆಸ್ ಕಾರ್ಯಕರ್ತರನ್ನು ಕೆರಳಿಸಿತ್ತು. ರಾತ್ರಿ ವೇಳೆಗೆ, ಎರಡೂ ಕಡೆಯ ಗುಂಪುಗಳು ಪ್ರತ್ಯೇಕವಾಗಿ ಮಾರ್ಚ್ ನಡೆಸಿದ್ದಲ್ಲದೆ ನಿಂದನೆಯ ಘೋಷಣೆಗಳನ್ನು ಕೂಗಿತ್ತು. ಆನಂತರ ಆರೆಸ್ಸೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಡೆಯಿಂದ ದಾಳಿ ನಡೆದಿದೆ ಎನ್ನಲಾಗುತ್ತಿದ್ದು ಆರೆಸ್ಸೆಸ್ ಕಾರ್ಯಕರ್ತ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಘರ್ಷಣೆಯಲ್ಲಿ ಎಸ್ಡಿಪಿಐ ಮತ್ತು ಆರೆಸ್ಸೆಸ್ ಸೇರಿದ ಹಲವು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಘಟನೆಯನ್ನು ಖಂಡಿಸಿ ಬಿಜೆಪಿ ಆಲಪ್ಪುಝ ಜಿಲ್ಲಾ ಘಟಕ ಬೆಳಗ್ಗಿನಿಂದ ಸಂಜೆಯ ವರೆಗೆ ಹರತಾಳಕ್ಕೆ ಕರೆ ನೀಡಿದೆ.
ವಯಲಾರ್ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿ ನೆಲೆಯಾಗಿದ್ದು ಹೆಚ್ಚುವರಿ ಪೊಲೀಸರ ಪಡೆಯನ್ನು ನಿಯೋಜಿಸಲಾಗಿದೆ.
AN RSS worker was hacked to death allegedly by members of Social Democratic Party of India (SDPI), the political wing of Popular Front of India, during a clash in Alappuzha district on Wednesday night.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
19-10-25 10:32 pm
Mangalore Correspondent
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
Kantara Controversy, Mangalore: ದೈವದ ಹೆಸರಲ್ಲಿ...
18-10-25 07:26 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm