ಬ್ರೇಕಿಂಗ್ ನ್ಯೂಸ್
26-02-21 12:20 pm Headline Karnataka News Network ದೇಶ - ವಿದೇಶ
ಮುಂಬೈ,ಫೆ.26: ಸ್ಫೋಟಕ ಒಳಗೊಂಡ ಎಸ್ಯುವಿ ಕಾರ್ ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಕಾಣಿಸಿಕೊಂಡಿದ್ದು, ಆತಂಕ ಹೆಚ್ಚಿಸಿದೆ.
ಪೆಡ್ಡಾರ್ ರಸ್ತೆಯಲ್ಲಿರುವ ಸುಪ್ರಸಿದ್ಧ ಆಂಟಿಲಿಯಾ ಮನೆಯ ಹೊರಗಡೆ ಸ್ಕಾರ್ಪಿಯೋ ಎಸ್ಯುವಿ ಕಾರ್ ಕಾಣಿಸಿಕೊಂಡಿದ್ದು, ಅದರ ಒಳಗಡೆ ಬ್ಯಾಗ್ನಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ. ವಾಹನ ನಿಂತಿದ್ದನ್ನು ಗುರುವಾರ ಸಂಜೆ ಅಂಬಾನಿ ಭದ್ರತಾ ಸಿಬ್ಬಂದಿ ಗುರುತಿಸಿದ್ದು, ಬಳಿಕ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಾಹಿತಿ ದೊರೆಯುತ್ತಿದ್ದಂತೆ ಗ್ಯಾಮದೇವಿ ಠಾಣೆಯ ಹಲವು ಪೊಲೀಸರು ಸ್ಥಳಕ್ಕೆ ಧಾವಿಸಿ ಎಸ್ಯುವಿ ಪರೀಕ್ಷಿಸಿದ್ದಾರೆ. ಬಳಿಕ ಬಾಂಬ್ ಸ್ಕ್ವಾಡ್ನ್ನು ಸಹ ಸ್ಥಳಕ್ಕೆ ಕರೆಸಲಾಗಿದ್ದು, ವಾಹನವನ್ನು ಪರೀಕ್ಷೆ ನಡೆಸಿದ ಬಳಿಕ 20 ಜೆಲೆಟಿನ್ ಕಡ್ಡಿ ಇರುವುದು ಪತ್ತೆಯಾಗಿದೆ. 20 ಜೆಲೆಟಿನ್ ಕಡ್ಡಿ ಪತ್ತೆಯಾಗುತ್ತಿದ್ದಂತೆ ಡಾಗ್ ಸ್ಕ್ವಾಡ್ ಸಹ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿತು.


ವಾಹನದಲ್ಲಿ 20 ಜೆಲೆಟಿನ್ ಕಡ್ಡಿ ಪತ್ತೆಯಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಖಚಿತಪಡಿಸಿದ್ದಾರೆ. ಕೇವಲ ಜೆಲೆಟಿನ್ ಸ್ಟಿಕ್ಸ್ ಮಾತ್ರ ಪತ್ತೆಯಾಗಿದ್ದು, ಸ್ಫೋಟಕದ ಸೆಂಬಲ್ ಪತ್ತೆಯಾಗಿಲ್ಲ ಎಂದು ಮುಂಬೈ ಪೊಲೀಸ್ ಪಿಆರ್ಒ ಖಚಿತಪಡಿಸಿದ್ದಾರೆ.

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಸಹ ಈ ಬಗ್ಗೆ ಪ್ರತಿಕ್ರಿಯಿಸಿ, ಮುಖೇಶ್ ಅಂಬಾನಿ ಅವರ ಮನೆ ಬಳಿ ಕಾರ್ ನಲ್ಲಿ ಜೆಲೆಟಿನ್ ಪತ್ತೆಯಾಗಿರುವ ಬಗ್ಗೆ ಮುಂಬೈ ಕ್ರೈಂ ಬ್ರಾಂಚ್ ತನಿಖೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.

ಸ್ಫೋಟಕ ವಸ್ತು ಪತ್ತೆಯಾಗುತ್ತಿದ್ದಂತೆ ಕಮಾಂಡೋಗಳು ಸೇರಿ ಭಾರೀ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಭಯೋತ್ಪಾದನೆ ನಿಗ್ರಹ ದಳ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಿಗೂಢ ವಾಹನದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಸಿಸಿಟಿವಿ ದೃಶ್ಯಗಳನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಪರಿಶೀಲಿಸುತ್ತಿದ್ದಾರೆ.
The Mumbai Police has lodged an FIR after an abandoned vehicle with explosive material was found near Antilia, the south Mumbai residence of Reliance Industries chairman Mukesh Ambani.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 04:11 pm
HK News Staffer
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am