ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm