ಬ್ರೇಕಿಂಗ್ ನ್ಯೂಸ್
26-02-21 05:54 pm Headline Karnataka News Network ದೇಶ - ವಿದೇಶ
ನವದೆಹಲಿ, ಫೆ.26: ಕೇಂದ್ರ ಚುನಾವಣಾ ಆಯೋಗ ಕೊನೆಗೂ ಪಂಚ ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಅಸ್ಸಾಂನಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 27ರಿಂದ ಎಪ್ರಿಲ್ 6ರ ನಡುವೆ ನಡೆಯಲಿದೆ. ಇದೇ ವೇಳೆ, ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದ್ದು, ಮಾರ್ಚ್ 27ರಿಂದ ಎಪ್ರಿಲ್ 29ರ ನಡುವೆ ದಿನಾಂಕಗಳನ್ನು ಪ್ರಕಟಿಸಿದೆ.

ದಕ್ಷಿಣ ಭಾರತದಲ್ಲಿ ಕೇರಳ ಮತ್ತು ತಮಿಳುನಾಡಿನ ಚುನಾವಣೆ ಪ್ರಮುಖವಾಗಿದ್ದು, ಎರಡು ಕಡೆಗಳಲ್ಲೂ ಇನ್ನೂ ಅಸ್ತಿತ್ವ ಸಾಧಿಸದ ಬಿಜೆಪಿ ಈ ಬಾರಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿದೆ. ಕೇರಳದಲ್ಲಿ 140 ಸೀಟುಗಳಿಗೆ ಚುನಾವಣೆ ನಡೆಯಲಿದ್ದು, ಕೆಲವು ಕಡೆ ಇದೇ ಮೊದಲ ಬಾರಿಗೆ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಕಂಡುಬಂದಿದೆ.

ಕಳೆದ ಬಾರಿ ತ್ರಿಸ್ತರ ಪಂಚಾಯತ್ ಚುನಾವಣೆಯಲ್ಲಿ ಬಹಳಷ್ಟು ಕಡೆ ತೀವ್ರ ಪೈಪೋಟಿ ನೀಡಿದ್ದ ಬಿಜೆಪಿ ಕೇರಳದ ಇತಿಹಾಸದಲ್ಲಿ ಇದೇ ಮೊದಲಿಗೆ ರಾಜ್ಯದಾದ್ಯಂತ ಬೆಂಬಲ ಗಳಿಸಿಕೊಂಡಿತ್ತು. ಈ ಬಾರಿ ಚುನಾವಣೆಗೂ ಮೊದಲೇ ವಿಜಯ ಯಾತ್ರೆ ಹೆಸರಲ್ಲಿ ಬಿಜೆಪಿ ನಾಯಕರು ರ್ಯಾಲಿ ಹಮ್ಮಿಕೊಂಡಿದ್ದಾರೆ. ಮೆಟ್ರೋ ಮ್ಯಾನ್ ಖ್ಯಾತಿಯ ಇ. ಶ್ರೀಧರನ್ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದ್ದು, ಕ್ರೀಡಾ ತಾರೆ ಪಿ.ಟಿ. ಉಷಾ ಅವರನ್ನೂ ಪಕ್ಷಕ್ಕೆ ಸೇರಿಸಲು ತಯಾರಿ ನಡೆಸಿದ್ದಾರೆ. ಇದೇ ವೇಳೆ, ತಮಿಳುನಾಡಿನಲ್ಲೂ ಬಿಜೆಪಿ ಚುನಾವಣೆಗೆ ಭಾರೀ ತಯಾರಿ ನಡೆಸಿದ್ದು, ಮಾಜಿ ಅಧಿಕಾರಿ ಅಣ್ಣಾಮಲೈ ಮೂಲಕ ಸದ್ದಿಲ್ಲದ ಪ್ರಯತ್ನಗಳನ್ನು ನಡೆಸಿದೆ.
ಎಪ್ರಿಲ್ ನಲ್ಲಿ ಪಂಚ ರಾಜ್ಯ ಚುನಾವಣೆ ; ಕೇರಳ, ತಮಿಳ್ನಾಡಿನಲ್ಲಿ ಒಂದೇ ಹಂತ, ಬಂಗಾಳಕ್ಕೆ ಏಳು ಹಂತ ?
The Election Commission Friday announced the schedule for upcoming Assembly elections in four states and one Union Territory (Puducherry).
07-01-26 10:33 pm
Bangalore Correspondent
ಇನ್ನೆಷ್ಟು ದಿನ ರಾಜಕೀಯದಲ್ಲಿ ಇರುತ್ತೇನೋ ಗೊತ್ತಿಲ್ಲ...
07-01-26 08:00 pm
ಬಂಧನ ವೇಳೆ ಪೊಲೀಸರ ಎಳೆದಾಟ, ಹರಿದ ಮಹಿಳೆಯ ಬಟ್ಟೆ ;...
07-01-26 03:07 pm
ಮತಪಟ್ಟಿ ಪರಿಷ್ಕರಣೆ ; ಉತ್ತರ ಪ್ರದೇಶದಲ್ಲಿ 2.89 ಕೋ...
07-01-26 12:12 pm
ಬಳ್ಳಾರಿ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ...
06-01-26 08:23 pm
07-01-26 09:37 pm
HK News Desk
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
ತಮಿಳುನಾಡಿನ ದೀಪೋತ್ಸವಕ್ಕೆ ಹೈಕೋರ್ಟ್ ಅನುಮತಿ ; ಅವಕ...
07-01-26 01:53 pm
ಬಾಂಗ್ಲಾದಲ್ಲಿ ಒಂದೇ ದಿನ ಮತ್ತಿಬ್ಬರು ಹಿಂದುಗಳ ಹತ್ಯ...
06-01-26 12:40 pm
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
07-01-26 11:06 pm
Mangalore Correspondent
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯಗೆ ನಿಂದಿಸಿ ಬರೆದು ಜ...
07-01-26 05:15 pm
ಬೋಟನ್ನು ಎಳೆದು ಕಟ್ಟುತ್ತಿದ್ದಾಗ ನದಿಗೆ ಬಿದ್ದು ಮೀನ...
07-01-26 12:10 pm
ವಿಧವೆ ಮೊಮ್ಮಗಳು, ಮರಿ ಮಕ್ಕಳೊಂದಿಗಿದ್ದ ವೃದ್ಧೆಯ ಗು...
06-01-26 08:25 pm
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm