ಮಾಲೀಕನನ್ನೇ ಕೊಂದ ಹುಂಜ ಈಗ ಪೊಲೀಸರ ವಶಕ್ಕೆ ; ಕೋರ್ಟ್ ಗೆ ಹಾಜರು

01-03-21 12:07 pm       Headline Karnataka News Network   ದೇಶ - ವಿದೇಶ

ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.

ಹೈದರಾಬಾದ್, ಮಾ.1 : ಮಾಲೀಕನನ್ನು ಕೊಂದ ಹುಂಜವನ್ನು ಪೊಲೀಸರು ಕಸ್ಟಡಿಗೆ ಪಡೆದು ಕೋರ್ಟ್ ಗೆ ಹಾಜರು ಪಡಿಸಲಿರುವ ವಿಚಿತ್ರ ಘಟನೆಯೊಂದು ತೆಲಂಗಾಣದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ತನುಗುಲ್ಲಾ ಸತೀಶ್ ಎಂದು ಗುರುತಿಸಲಾಗಿದೆ. ತೆಲಂಗಾಣದ ಜಗ್ತಿಯಲ್ ಜಿಲ್ಲೆಯ ಲೋಥುನೂರು ಪ್ರದೇಶದಲ್ಲಿ ಎಲ್ಲಮ್ಮ ದೇವಾಲಯದ ಸಮೀಪ ಅಕ್ರಮವಾಗಿ ಹುಂಜಗಳ ಅಂಕವನ್ನು ನಡೆಸಲಾಗಿತ್ತು. ಈ ವೇಳೆ ನಡೆದ ಅವಘಡದಿಂದ ಸತೀಶ್ ಸಾವನ್ನಪ್ಪಿದ್ದನು.

ಹುಂಜ ಅಂಕದಲ್ಲಿ ಕಾದಾಡಿ ಆಯಾಸಗೊಂಡಿತ್ತು. ಈ ವೇಳೆ ಸತೀಶ್ ಹುಂಜವನ್ನು ಬಿಗಿಯಾಗಿ ಹಿಡಿದುಕೊಂಡಿದ್ದಾನೆ. ಆಗ ಹುಂಜದ ಕಾಲಿಗೆ ಕಟ್ಟಿದ್ದ ಚೂರಿ ತೊಡೆಗೆ ತಾಕಿ ಸತೀಶ್ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದನು.

ಈ ಸಂಬಂಧ ಅಂಕವನ್ನು ಆಯೋಜನೆ ಮಾಡಿದ್ದ ಆಯೋಜಕನನ್ನು ವಶಕ್ಕೆ ಪಡೆದಿದ್ದೇವೆ. ಹುಂಜವನ್ನು ಹಗ್ಗದಿಂದ ಠಾಣೆಯಲ್ಲಿ ಕಟ್ಟಿ ಹಾಕಲಾಗಿದೆ. ಅದಕ್ಕೆ ಬೇಕಾದ ಆಹಾರವನ್ನು ನೀಡುತ್ತಿದ್ದೇವೆ. ಹುಂಜವನ್ನು ಕೋರ್ಟ್ ಗೆ ಹಾಜರು ಪಡಿಸುತ್ತೇವೆ ನ್ಯಾಯಾಧೀಶರು ಹೇಳಿದಂತೆ ಮುಂದಿನ ಕ್ರಮವನ್ನು ಕೈಗೊಳ್ಳುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.

An illegal cockfighting event turned fatal, not just for the cocks, but for a man in Telangana, who bled to death after a knife attached to the leg of his rooster accidentally cut into his groin.