ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm