ಬ್ರೇಕಿಂಗ್ ನ್ಯೂಸ್
19-08-20 03:04 pm Headline Karnataka News Network ದೇಶ - ವಿದೇಶ
ಮಾಲಿ, ಆ.19: ಮಾಲಿಯಲ್ಲಿ ಬುಧವಾರ ಕ್ಷಿಪ್ರ ಕ್ರಾಂತಿ ನಡೆದು ಬಂಡುಕೋರ ಪಡೆಗಳು ಅಧ್ಯಕ್ಷರನ್ನು ಸೆರೆ ಹಿಡಿದಿವೆ. ಇದರ ಬೆನ್ನಲ್ಲೇ ದೇಶದಲ್ಲಿ ರಕ್ತಪಾತ ತಪ್ಪಿಸುವ ಸಲುವಾಗಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ಇಬ್ರಾಹೀಂ ಬೌಬಕ್ಕರ್ ಕೀತಾ ಪ್ರಕಟಿಸಿದ್ದಾರೆ.
ಬಂಡುಕೋರ ಸೈನಿಕರು ಅಧ್ಯಕ್ಷ ಕೀತಾ ಹಾಗೂ ಪ್ರಧಾನಿ ಬೌಬೌ ಸಿಸ್ಸೆ ಅವರನ್ನು ಮಂಗಳವಾರ ಮಧ್ಯಾಹ್ನ ಸೆರೆ ಹಿಡಿದಿದ್ದರು. ಈ ಮೂಲಕ ಪಶ್ಚಿಮ ಆಫ್ರಿಕಾ ದೇಶದಲ್ಲಿ ಒಂದು ತಿಂಗಳ ರಾಜಕೀಯ ಬಿಕ್ಕಟ್ಟು ತಾರಕಕ್ಕೇರಿದೆ. ಬಂಡುಕೋರ ಸೈನಿಕರು ಸೆರೆ ಹಿಡಿದ ಇಬ್ಬರು ಮುಖಂಡರನ್ನು ರಾಜಧಾನಿ ಬಮಾಕೋ ಬಳಿಯ ಕಾತಿ ನಗರದಲ್ಲಿರುವ ಸೇನಾ ನೆಲೆಗೆ ಒಯ್ಯಲಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ. ಬಂಡುಕೋರರು ಸೇನಾ ನೆಲೆಯನ್ನು ಮಂಗಳವಾರ ವಶಪಡಿಸಿಕೊಂಡಿದ್ದರು.
ಅಧ್ಯಕ್ಷರ ಬಂಧನವನ್ನು ಸಂಭ್ರಮಿಸಿದ ಜನರು ನಗರದ ಕೇಂದ್ರಭಾಗದಲ್ಲಿ ಜಮಾಯಿಸಿ ಅಧ್ಯಕ್ಷರ ರಾಜೀನಾಮೆಗೆ ಒತ್ತಾಯಿಸಿದರು. ಇದಕ್ಕೂ ಮುನ್ನ ಬಂಡುಕೋರ ಸೈನಿಕರು 75 ವರ್ಷ ವಯಸ್ಸಿನ ಕೀತಾ ಅವರನ್ನು ಅಧಿಕೃತ ಬಂಗಲೆಯಿಂದ ಬಂಧಿಸಿದ್ದರು.
ಸಮಾಧಾನಚಿತ್ತದಿಂದ ಇದ್ದಂತೆ ಕಂಡುಬಂದ ಕೀತಾ ಮಂಗಳವಾರ ಮಧ್ಯರಾತ್ರಿ ಸರ್ಕಾರಿ ಟೆಲಿವಿಷನ್ ಮುಂದೆ ಹಾಜರಾಗಿ ಸರ್ಕಾರ ಹಾಗೂ ರಾಷ್ಟ್ರೀಯ ಅಸೆಂಬ್ಲಿ ವಿಸರ್ಜಿಸಿರುವುದನ್ನು ಪ್ರಕಟಿಸಿದರು. ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡದೇ ಅನ್ಯ ಮಾರ್ಗವಿಲ್ಲ ಎಂದು ಘೋಷಿಸಿದರು.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm