ಬ್ರೇಕಿಂಗ್ ನ್ಯೂಸ್
03-03-21 11:19 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.3: ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿ ತಮಿಳುನಾಡಿನಲ್ಲಿ ಸಂಚಲನ ಎಬ್ಬಿಸಿದ್ದ ಶಶಿಕಲಾ ನಟರಾಜನ್ ಸಕ್ರಿಯ ರಾಜಕೀಯದಿಂದ ದಿಢೀರ್ ನಿವೃತ್ತಿ ಹೊಂದುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಅಷ್ಟೇ ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷವನ್ನ ಸೋಲಿಸಿ ಎಐಎಡಿಎಂಕೆ ಪಕ್ಷವನ್ನು ಗೆಲ್ಲಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೆ, ಅಮ್ಮ ಜಯಲಲಿತಾ ಅವರ ಸುವರ್ಣ ಆಡಳಿತಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ನಾನು ಎಂದೂ ಸಹ ಯಾವುದೇ ಅಧಿಕಾರ ಸ್ಥಾನದ ಹಿಂದೆ ಬಿದ್ದಿಲ್ಲ. ಜಯಲಲಿತಾ ಬದುಕಿದ್ದಾಗಲೂ ಅಧಿಕಾರದ ಆಸೆ ಪಟ್ಟಿರಲಿಲ್ಲ. ಅವರು ಇಲ್ಲದಾಗಲೂ ಅಧಿಕಾರಕ್ಕಾಗಿ ಆಸೆ ಪಡುವುದಿಲ್ಲ. ಆದರೆ, ನಾನು ರಾಜಕೀಯ ತೊರೆಯುತ್ತಿದ್ದೇನೆ. ನಮ್ಮ ಪಕ್ಷ ಗೆದ್ದು ಜಯಲಲಿತಾ ಅವರ ಪರಂಪರೆಯನ್ನ ಮುಂದುವರೆಸಲಿ ಎಂದು ಇದೇ ವೇಳೆ ತಮ್ಮ ಪ್ರಕಟಣೆಯಲ್ಲಿ ಎಐಎಡಿಎಂಕೆಗೆ ಹಾರೈಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಶಿಕಲಾ ಇತ್ತೀಚೆಗಷ್ಟೇ ಬೆಂಗಳೂರಿನ ಜೈಲಿನಿಂದ ಬಿಡುಗಡೆಯಾಗಿ ಊರಿಗೆ ವಾಪಸ್ಸಾಗಿದ್ದರು. ಶಶಿಕಲಾ ಬಿಡುಗಡೆಯಿಂದಾಗಿ ತಮಿಳುನಾಡಿನ ರಾಜಕೀಯ ಚಿತ್ರಣ ಬದಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ದಿಢೀರ್ ನಿವೃತ್ತಿ ಘೋಷಿಸುವ ಮೂಲಕ ಶಶಿಕಲಾ ತಮಿಳುನಾಡು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.
Expelled AIADMK leader V K Sasikala on Wednesday stated that she is quitting public life while asking the AIADMK cadre to stand united and ensure DMK is defeated in forthcoming Assembly elections.
03-09-25 01:36 pm
HK News Desk
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
Ranya Rao: ಚಿನ್ನ ಸ್ಮಗ್ಲರ್ ರನ್ಯಾ ರಾವ್ ಗೆ ಮತ್ತೆ...
02-09-25 06:22 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 11:53 am
HK News Desk
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
ಮಗನಿಗೆ ಇಲ್ಲ ಉದ್ಯೋಗ ; ಮುಂಬೈನಿಂದ ಉಡುಪಿಗೆ ಬಂದು ಆ...
02-09-25 01:05 pm
02-09-25 07:09 pm
Mangalore Correspondent
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm