ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am