ಬ್ರೇಕಿಂಗ್ ನ್ಯೂಸ್
04-03-21 12:01 pm Headline Karnataka News Network ದೇಶ - ವಿದೇಶ
ಕಾಸರಗೋಡು, ಮಾ.4 : ಅಲೆಗಳ ಅಬ್ಬರಕ್ಕೆ ಸಿಲುಕಿದ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿ ಐವರು ಮೀನುಗಾರರು ಅಪಾಯದಲ್ಲಿ ಸಿಲುಕಿದ ಘಟನೆ ಬೇಕಲದ ಬಳಿ ನಡೆದಿದ್ದು, ಈ ಬಗ್ಗೆ ಮಾಹಿತಿ ಪಡೆದ ಕರಾವಳಿ ರಕ್ಷಣಾ ಪಡೆ ಸಿಬ್ಬಂದಿ ಅವರನ್ನು ರಕ್ಷಿಸಿದ್ದಾರೆ.
ಬುಧವಾರ ರಾತ್ರಿ ಘಟನೆ ನಡೆದಿದ್ದು, ಕಾಸರಗೋಡು ತೀರದಿಂದ ಹತ್ತು ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರ ಮಧ್ಯೆ ಬೋಟ್ ಅಲೆಗಳ ಅಬ್ಬರಕ್ಕೆ ಮಗುಚಿ ಇಬ್ಭಾಗಗೊಂಡಿದ್ದು, ಬೋಟಿನ ಒಂದು ಭಾಗವನ್ನು ಮೀನುಗಾರರು ಹಿಡಿದುಕೊಂಡು ಜೀವನ್ಮರಣ ಹೋರಾಟ ನಡೆಸಿದ್ದಾರೆ.

ಈ ಬಗ್ಗೆ ಕರಾವಳಿ ರಕ್ಷಣಾ ಸಿಬಂದಿ ಮಾಹಿತಿ ಪಡೆದು ದೌಡಾಯಿಸಿದ್ದು ಐವರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ. ಎರಡು ದಿನಗಳ ಹಿಂದೆ ನೀಲೇಶ್ವರ ಆಯಿತ್ತಲದಿಂದ ಮರಿಯ ಎಂಬ ಹೆಸರಿನ ಈ ಬೋಟ್ ಮೀನುಗಾರಿಕೆಗೆ ತೆರಳಿದ್ದು, ಬೋಟ್ ನಲ್ಲಿದ್ದವರು ತಿರುವನಂತಪುರ ನಿವಾಸಿಗಳೆಂದು ತಿಳಿದುಬಂದಿದೆ.
ದುರಂತಕ್ಕೀಡಾದ ಬಳಿಕ ಮೀನುಗಾರರು ಎರಡು ಗಂಟೆಗಳ ಕಾಲ ಸಮುದ್ರ ಮಧ್ಯೆ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಬೋಟಿನಲ್ಲಿದ್ದ ಶ್ಯಾಮ್ (18), ಜಿಮ್ಮಿ (21), ಕುಮಾರ್ (43), ಈಶ್ವರ್ (58), ದಾಯಿ ರೋಸ್ (37) ಅವರನ್ನು ರಕ್ಷಿಸಿ ತಡರಾತ್ರಿ ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.
After a fishing boat capsized due to strong waves, five fishermen were facing danger to their lives at deep-sea at Bekal in Kasargod.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm