ಬ್ರೇಕಿಂಗ್ ನ್ಯೂಸ್
05-03-21 09:37 am Headline Karnataka News Network ದೇಶ - ವಿದೇಶ
ದೆಹಲಿ, ಮಾ 5: ಬಾಲಿವುಡ್ನ ನಟ, ನಿರ್ದೇಶಕ ಅನುರಾಗ್ ಕಶ್ಯಪ್ ಮತ್ತು ನಟಿ ತಾಪ್ಸಿ ಪನ್ನು ಅವರ ಮನೆಗಳ ಮೇಲೆ ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಸುಮಾರು ₹ 350 ಕೋಟಿ ಮೊತ್ತದ ಅವ್ಯವಹಾರ ಪತ್ತೆ ಮಾಡಿದ್ದಾರೆ.
ಅನುರಾಗ್ ಕಶ್ಯಪ್ ಮತ್ತು ತಾಪ್ಸಿ ಪನ್ನು ಮನೆಗಳ ಮೇಲೆ ನಡೆದ ದಾಳಿಗಳ ಬಗ್ಗೆ ಬಾಲಿವುಡ್ನ ಗಣ್ಯರು ಮೌನ ಮುರಿಯದಿರುವುದು ಟ್ವಿಟರ್ನಲ್ಲಿ ಚರ್ಚೆಗೆ ಗ್ರಾಸವಾಗಿದೆ. #TaxChor #ITaxfraud ಹ್ಯಾಷ್ಟ್ಯಾಗ್ಗಳು ಟ್ವಿಟರ್ ಇಂಡಿಯಾದಲ್ಲಿ ಟಾಪ್ ಟ್ರೆಂಡ್ ಆಗಿವೆ. ಸಾಕಷ್ಟು ಜನರು ತೆರಿಗೆ ವಂಚನೆಯನ್ನು ಟೀಕಿಸಿದ್ದಾರೆ.
ಸಿನಿಮಾಗಳ ಬಾಕ್ಸ್ ಆಫೀಸ್ ಸಂಗ್ರಹದ ಕೇವಲ ಶೇ 2ರಷ್ಟು ಮೊತ್ತವನ್ನು ಮಾತ್ರವೇ ಆದಾಯವಾಗಿ ಘೋಷಿಸಿದ್ದಾರೆ. ₹ 20 ಕೋಟಿ ಮೊತ್ತದಷ್ಟು ಬೋಗಸ್ ಖರ್ಚಿನ ದಾಖಲೆಗಳು ಪತ್ತೆಯಾಗಿವೆ. ಇಬ್ಬರನ್ನೂ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 5 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತು.
ಫಾಂಟಾಮ್ ಫಿಲ್ಸ್ಮ್ ಕಂಪನಿಯ ಷೇರು ವಹಿವಾಟಿನ ಮಾಹಿತಿಯನ್ನು ತಿದ್ದಿರುವ, ಮೌಲ್ಯವನ್ನು ತಪ್ಪಾಗಿ ದಾಖಲಿಸಿರುವ ದಾಖಲೆಗಳು ಪತ್ತೆಯಾಗಿವೆ. ₹ 350 ಕೋಟಿ ಮೊತ್ತದಷ್ಟು ತೆರಿಗೆ ಬಾಧ್ಯತೆ ಇವರ ಮೇಲಿದೆ. ತಪ್ಸಿ ಪನ್ನು ಅವರು ₹ 5 ಕೋಟಿಯಷ್ಟು ತೆರಿಗೆ ಬಾಧ್ಯತೆ ಹೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಇನ್ನಷ್ಟು ದಾಳಿಗಳು ನಡೆಯುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಫಾಂಟಾಮ್ ಫಿಲ್ಮ್ಸ್ನ ತೆರಿಗೆ ವಂಚನೆ ಬಗ್ಗೆ ತನಿಖೆ ನಡೆಸಲು ಮುಂಬೈ ಮತ್ತು ಪುಣೆಯ 28 ಸ್ಥಳಗಳಲ್ಲಿ ದಾಳಿ ನಡೆಸಲಾಗಿತ್ತು. ರಿಲಯನ್ಸ್ ಎಂಟರ್ಟೈನ್ಮೆಂಟ್ ಸಮೂಹದ ಸಿಇಒ ಶಿಬಶೀಷ್ ಸರ್ಕಾರ್ ಮತ್ತು KWAN, ಎಕ್ಸೀಡ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಗಳ ಮೇಲೆಯೂ ದಾಳಿ ನಡೆದಿತ್ತು. ದಾಳಿಯ ವೇಳೆ ಪತ್ತೆಯಾದ 7 ಬ್ಯಾಂಕ್ ಲಾಕರ್ಗಳ ಬಳಕೆ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
The Income Tax Department has detected financial irregularities of over Rs 650 crore after it raided two film production companies, two talent management companies and a leading actress, the Central Board of Direct Taxes claimed on Thursday but did not take any names.
24-01-26 08:31 pm
Mangaluru Staffer
ಸಿದ್ದರಾಮಯ್ಯ ಆಪ್ತ ಮರಿಗೌಡ ಮುಡಾದಿಂದ ಅಕ್ರಮ ನಿವೇಶನ...
23-01-26 03:21 pm
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
24-01-26 08:38 pm
HK staffer
ಮಂಜೇಶ್ವರ ಚೆಕ್ ಪೋಸ್ಟ್ ನಲ್ಲಿ ವಾಹನ ತಪಾಸಣೆ ; ಕೆಎಸ...
23-01-26 06:44 pm
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
26-01-26 05:05 pm
HK News Desk
ರೌಡಿಗಳ ಪತ್ತೆಗೆ ವಿಶೇಷ ಕಾರ್ಯಾಚರಣೆ ; ಪೊಲೀಸರ ಕೈಗೆ...
24-01-26 11:23 pm
ದೇಶದ ಅತಿ ಹಳೆಯ ತಾಂತ್ರಿಕ ಶಿಕ್ಷಣ ಸಂಸ್ಥೆ ಮಂಗಳೂರಿನ...
24-01-26 08:14 pm
ಬಹುಮುಖ ಪ್ರತಿಭೆಯ ಕಲಾವಿದ ಸ್ವಾತಿ ಸತೀಶ್ ಆತ್ಮಹತ್ಯೆ...
24-01-26 08:04 pm
ಯೆನಪೋಯ ವಿವಿಯಲ್ಲಿ ಮಾನಸಿಕ ಆರೋಗ್ಯ ನರ್ಸಿಂಗ್ ವಿಭಾಗ...
23-01-26 09:21 pm
26-01-26 03:03 pm
HK News Desk
ಅಮಾನ್ಯ ನೋಟಿನ 400 ಕೋಟಿ ದರೋಡೆ ಪ್ರಕರಣ ; ಗುಜರಾತ್...
25-01-26 10:11 pm
Indias Biggest Robbery in Belagavi: ಇಡೀ ದೇಶದಲ...
25-01-26 09:48 am
ರಾಮಕುಂಜ ; ತಂದೆ - ಮಗನ ಜಗಳ ದುರಂತ ಅಂತ್ಯ, ಚೂರಿ ಇರ...
24-01-26 11:18 pm
ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ ; ಎಂಟು ಮಂ...
24-01-26 08:53 pm