ಬ್ರೇಕಿಂಗ್ ನ್ಯೂಸ್
19-08-20 05:30 pm Headline Karnataka News Network ದೇಶ - ವಿದೇಶ
ವೈಟ್ಹೌಸ್: ಟ್ರಂಪ್ ಫೇಸ್ಬುಕ್ ಸಂಸ್ಥೆಯ ಮಾನದಂಡಗಳನ್ನು ಮುರಿದರೆ ಅಂತಹ ಹೇಳಿಕೆಗಳನ್ನು ತಾಣದಿಂದ ತೆಗೆದುಹಾಕಲಾಗುತ್ತದೆ ಎಂದು ಫೇಸ್ಬುಕ್ ಡೊನಾಲ್ಡ್ ಟ್ರಂಪ್ಗೆ ನೇರ ಎಚ್ಚರಿಕೆ ನೀಡಿದ.
ಅಧ್ಯಕ್ಷರು ದ್ವೇಷದ ಭಾಷಣ ಅಥವಾ ಕೋವಿಡ್ ಬಗ್ಗೆ ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡಿದರೆ ಅದನ್ನು ಮುಳಾಜಿಲ್ಲದೇ ಅಳಿಸಲಾಗುತ್ತದೆ ಎಂದು ಹೇಳಿದೆ.
2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಫೇಸ್ಬುಕ್ನಲ್ಲಿ ಈ ಕುರಿತಂತೆ ಹಲವು ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಚುನಾವಣೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಫೇಸುºಕ್ ಈಗ ಕಠಿನಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಚುನಾವಣೆ ಕುರಿತಂತೆ ಸಾರ್ವಜನಿಕರಲ್ಲಿನ ಗೊಂದಲಗಳನ್ನು ಕಡಿಮೆ ಮಾಡಲು ಫೇಸ್ಬುಕ್ ಕಳೆದ ವಾರ “ಮತದಾನ ಮಾಹಿತಿ ಕೇಂದ್ರಗಳನ್ನು’ ಪ್ರಾರಂಭಿಸಿತ್ತು. ಇದು ಅಮೆರಿಕಾದ ಜನರಿಗೆ ಮತದಾನದ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡುತ್ತದೆ. ಕಂಪನಿಯ ಪ್ರಕಾರ ಈ ಕೇಂದ್ರಗಳು ಫೇಸ್ಬುಕ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಇರುತ್ತವೆ.
ತನ್ನಲ್ಲಿನ ಅವಕಾಶವನ್ನು ಬಳಸಿಕೊಂಡು ರಾಜಕೀಯ ವ್ಯಕ್ತಿಗಳ ದ್ವೇಷದ ಮಾತು ಮತ್ತು ಸುಳ್ಳು ಸುದ್ದಿಗಳ ಬಗ್ಗೆ ಕ್ರಮ ತೆಗೆದುಕೊಳ್ಳಲು ಫೇಸ್ಬುಕ್ ಪ್ರಾರಂಭಿಸಿದೆ. ಚುನಾವಣೆಯಲ್ಲಿ ಯಾವುದೇ ಪರ ಅಥವ ವಿರೋಧಗಳನ್ನು ಬೆಂಬಲಿಸದೇ ನಿಪಕ್ಷಪಾತವಾಗಿ ಇರಲು ಕೆಲವು ಅತ್ಯಾಧುನಿಕ ವ್ಯವಸ್ಥೆಗಳನ್ನು ರಚಿಸಿದೆ.
ಇದೇ ಕಾರಣಕ್ಕೆ ಸದ್ಯ ಫೇಸ್ಬುಕ್ ಭಾರತದಲ್ಲಿ ವಿವಾದದಲ್ಲಿದೆ. ಆಡಳಿತ ಪಕ್ಷ ಬಿಜೆಪಿಯನ್ನು ಬೆಂಬಲಿಸುತ್ತದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಬಳಿಕ ಇದಕ್ಕೆ ಫೇಸ್ಬುಕ್ ಸ್ಪಷ್ಟನೆಯನ್ನು ನೀಡಿತ್ತು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am