ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm