ಬ್ರೇಕಿಂಗ್ ನ್ಯೂಸ್
07-03-21 06:17 pm Headline Karnataka News Network ದೇಶ - ವಿದೇಶ
ಚೆನ್ನೈ, ಮಾ.7: ದಕ್ಷಿಣ ಭಾರತದ ಪ್ರಮುಖ ಜುವೆಲ್ಲರಿ ಕಂಪನಿಗೆ ಸೇರಿದ 27ಕ್ಕೂ ಹೆಚ್ಚು ಕಚೇರಿ ಮತ್ತು ಮಳಿಗೆಗಳಿಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಒಂದು ಸಾವಿರ ಕೋಟಿಗೂ ಹೆಚ್ಚು ಅಕ್ರಮ ಸಂಪತ್ತನ್ನು ಪತ್ತೆ ಮಾಡಿದ್ದಾರೆ.
ತಮಿಳುನಾಡು ಒಂದರಲ್ಲೇ ಕಂಪನಿಗೆ ಸೇರಿದ 22 ಕಡೆಗಳಲ್ಲಿ ದಾಳಿ ನಡೆದಿದ್ದರೆ, ಮುಂಬೈ, ಜೈಪುರ, ತ್ರಿಶ್ಶೂರ್ ನಲ್ಲಿಯೂ ದಾಳಿ ನಡೆದಿದೆ. ತಮಿಳುನಾಡಿನಲ್ಲಿ ಭಾರೀ ಪ್ರಮಾಣದ ಅನಧಿಕೃತ ಆಸ್ತಿಯನ್ನು ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಚೆನ್ನೈ, ತಿರುಚಿರಾಪಳ್ಳಿ, ನೆಲ್ಲೂರು, ಮದುರೈ, ಕೊಯಂಬತ್ತೂರು ಹೀಗೆ ವಿವಿಧ ಕಡೆ ದಾಳಿ ನಡೆದಿತ್ತು.
ವಿಧಾನಸಭೆ ಚುನಾವಣೆ ಸಂದರ್ಭದಲ್ಲೇ ಐಟಿ ದಾಳಿ ನಡೆದು, ಭಾರೀ ಅಕ್ರಮವನ್ನು ಪತ್ತೆ ಮಾಡಿದ್ದು ರಾಜಕೀಯ ಪಕ್ಷಗಳನ್ನು ಚಿಂತೆಗೀಡು ಮಾಡಿದೆ. ನಗದು ಮೂಲಕ ಅನಧಿಕೃತ ಆಸ್ತಿ ಪತ್ರಗಳನ್ನು ಹೊಂದಿರುವುದು, ನೋಟು ಬ್ಯಾನ್ ಸಂದರ್ಭದಲ್ಲಿ ಭಾರೀ ಅಕ್ರಮ ವಹಿವಾಟು ನಡೆಸಿರುವುದು ದಾಳಿ ವೇಳೆ ಪತ್ತೆಯಾಗಿದೆ.
ಲೆಕ್ಕಪತ್ರಗಳಿಲ್ಲದ ನಗದು ವ್ಯವಹಾರ, ನೋಟು ಬ್ಯಾನ್ ಸಂದರ್ಭದಲ್ಲಿ ಮಾಡಲಾದ ಠೇವಣಿಗಳು, ಅಕ್ರಮ ವಹಿವಾಟು ನಡೆಸಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಗಳನ್ನು ಪತ್ತೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಾಳಿಗೆ ಒಳಗಾದ ಜುವೆಲ್ಲರಿ ಕಂಪನಿಯ ಹೆಸರನ್ನು ಅಧಿಕಾರಿಗಳು ದೃಢಪಡಿಸಿಲ್ಲ. ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ರಂಗೇರುತ್ತಿರುವ ಸಂದರ್ಭದಲ್ಲೇ ಐಟಿ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am