ಬ್ರೇಕಿಂಗ್ ನ್ಯೂಸ್
31-07-20 03:05 pm Headline Karnataka News Network ದೇಶ - ವಿದೇಶ
ನ್ಯೂಯಾರ್ಕ್: ಇಲ್ಲಿನ ಸ್ಟೇಟೆನ್ ಐಲ್ಯಾಂಡ್ನಲ್ಲಿ 7 ವರ್ಷದ ಜರ್ಮನ್ ಶೆಫರ್ಡ್ ಕೋವಿಡ್ 19ಗೆ ಬಲಿಯಾಗಿದೆ. ಈ ಮೂಲಕ ಕೋವಿಡ್ 19 ದೃಢಪಟ್ಟ ಜಗತ್ತಿನ ಮೊದಲ ಶ್ವಾನ ಮೃತಪಟ್ಟಿದೆ.
ಸಾವನ್ನಪ್ಪಿದ ಶ್ವಾನ ಬಡ್ಡಿ ಕಳೆದ ಏಪ್ರಿಲ್ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿತ್ತು. ಅದೇ ಸಮಯದಲ್ಲಿ ಮಾಲೀಕ ರಾಬರ್ಟ್ ಮಹೋನಿ ಕೂಡ ಕೋವಿಡ್ 19 ನಿಂದ ಗುಣಮುಖರಾಗುತ್ತಿದ್ದರು ಎಂದು ನ್ಯಾಷನಲ್ ಜಿಯೋಗ್ರಫಿ ತಿಳಿಸಿದೆ.
ರಾಬರ್ಟ್ ಅವರು ಹಲವಾರು ವಾರ ಕೊರೊನಾ ವೈರಸ್ಗೆ ತುತ್ತಾದ ನಂತರ ಶ್ವಾನ ಬಡ್ಡಿಯಲ್ಲೂ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಹೀಗಾಗಿ ಮೇ ತಿಂಗಳಲ್ಲಿ ಪಶುವೈದ್ಯರು ಪರೀಕ್ಷಿಸಿದ್ದು, ಈ ವೇಳೆ ಬಡ್ಡಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ಆ ನಂತರ ಬಡ್ಡಿಯ ಆರೋಗ್ಯ ನಿಧಾನವಾಗಿ ಕುಸಿಯುತ್ತಾ ಬಂತು. ಕ್ರಮೇಣ ಹೆಪ್ಪುಗಟ್ಟಿದ ರೀತಿಯಲ್ಲಿ ವಾಂತಿ, ಮೂತ್ರದಲ್ಲೂ ರಕ್ತ ಹಾಗೆಯೇ ನಡೆದಾಡಲು ಕಷ್ಟಪಡುತ್ತಿತ್ತು. ಈ ಹಿನ್ನೆಲೆಯಲ್ಲಿ ಮಹೋನಿ ಮತ್ತು ಅವರ ಪತ್ನಿ ಆಲಿಸನ್ ಜುಲೈ 11 ರಂದು ಶ್ವಾನಕ್ಕೆ ದಯಾಮರಣ ನೀಡಿದ್ದಾರೆ.
ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನೆಕ್ರೋಪ್ಸಿ ಪರೀಕ್ಷೆಗಾಗಿ ನಾಯಿಯ ಮೃತದೇಹವನ್ನು ತೆಗೆದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಆದರೆ ಈ ಬಗ್ಗೆ ಪಶುವೈದ್ಯರ ಜೊತೆ ಮಾತನಾಡಿದಾಗ ಅವರು, ಈಗಾಗಲೇ ನಾಯಿಯನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 12 ಶ್ವಾನಗಳು ಹಾಗೂ 19 ಬೆಕ್ಕುಗಳಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ನ್ಯಾಷನಲ್ ಜಿಯೋಗ್ರಫಿ ಮಾಹಿತಿ ನೀಡಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am