ಬ್ರೇಕಿಂಗ್ ನ್ಯೂಸ್
08-03-21 04:10 pm Headline Karnataka News Network ದೇಶ - ವಿದೇಶ
ಮುಂಬೈ, ಮಾ 8: ಮದುವೆಯಾಗುವುದಾಗಿ ಹೇಳಿ ವಂಚಿಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿರುತ್ತದೆ. ವಂಚನೆ ಮಾಡುವವರ ಪೈಕಿ ಪುರುಷರೇ ಹೆಚ್ಚು. ಆದರೆ, ಮಹಾರಾಷ್ಟ್ರ ರಾಜಧಾನಿ ಮುಂಬೈನಲ್ಲಿ ವೃದ್ಧರೊಬ್ಬರನ್ನು ಮದುವೆಯಾಗುವುದಾಗಿ ಭರವಸೆ ನೀಡಿದ ಮಹಿಳೆ ವಂಚಿಸಿದ್ದಾಳೆ. ಫೈನಾನ್ಸ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ 73 ವರ್ಷದ ವ್ಯಕ್ತಿಗೆ 1.3 ಕೋಟಿ ರೂ. ವಂಚಿಸಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಆತನನ್ನು ಮದುವೆಯಾಗುವುದಾಗಿ ಮತ್ತು ವೃದ್ಧಾಪ್ಯದಲ್ಲಿ ಆ ವ್ಯಕ್ತಿಯನ್ನು ನೋಡಿಕೊಳ್ಳುವುದಾಗಿ ಭರವಸೆ ನೀಡಿದ ನಂತರ ಮಹಿಳೆ ಹಣ ಪಡೆದುಕೊಂಡಿದ್ದಳು ಎನ್ನಲಾಗಿದೆ.
ಈ ಸಂಬಂಧ ಶಾಲಿನಿ ಸಿಂಗ್ ಎಂಬ ಮಹಿಳೆ ವಿರುದ್ಧ ಮುಂಬೈನ ಮಲಾಡ್ನ ಮಾಲ್ವಾನಿ ನಿವಾಸಿ ಜೆರೋನ್ ಡಿಸೋಜಾ ಅಂಧೇರಿ ಪೊಲೀಸರಿಗೆ ಎಫ್ಐಆರ್ ದಾಖಲಿಸಿದ್ದಾರೆ. ಮದುವೆಯ ನೆಪದಲ್ಲಿ ಆ ಮಹಿಳೆ ತನ್ನೊಂದಿಗೆ ಸ್ನೇಹ ಬೆಳೆಸಿದ್ದರು. ನಂತರ 1 ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ವಂಚಿಸಿದ್ದಾರೆಂದು ಡಿಸೋಜಾ ಡಿಸೆಂಬರ್ 2020 ರಲ್ಲಿ ದೂರು ಸಲ್ಲಿಸಿದ್ದರು. ಈ ಸಂಬಂಧ ಇತ್ತೀಚೆಗೆ ಪ್ರಕರಣ ದಾಖಲಾಗಿದೆ.
ಕಳೆದ ವರ್ಷ ಶಾಲಿನಿ ಸಿಂಗ್, 73 ವರ್ಷದ ಡಿಸೋಜಾರನ್ನು ಪ್ರಪೋಸ್ ಮಾಡಿದ್ದರು ಮತ್ತು ಆ ಹಣವನ್ನು ವ್ಯವಹಾರ ಪ್ರಾರಂಭಿಸಲು ಹೂಡಿಕೆ ಮಾಡುವುದಾಗಿ ತಿಳಿಸಿದ್ದರು. ಅಲ್ಲದೆ, ಅದರಿಂದ ಬಂದ ಲಾಭವನ್ನು ಇಬ್ಬರೂ ಸಮಾನವಾಗಿ ಹಂಚಿಕೊಳ್ಳೋಣ ಎಂದೂ ಹೇಳಿಕೊಂಡಿದ್ದಳೆಂದು ಡಿಸೋಜಾ ದೂರು ನೀಡಿದ್ದಾರೆಂದು ಪೊಲೀಸರು ಮಾಹಿತಿ ನೀಡಿರುವ ಬಗ್ಗೆ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.
An elderly man at a finance company in Mumbai has been duped of Rs 1.3 crore after a woman promised to marry him. The woman had asked for the money after promising to marry him and take care of him in his old age.
03-09-25 02:30 pm
Bangalore Correspondent
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
Sowjanya Case, Dharmasthala: ಸೌಜನ್ಯಾ ಪ್ರಕರಣ ;...
02-09-25 08:37 pm
ಮಕ್ಕಳ ಕಳ್ಳರು ಹೀಗೂ ಮಾಡುತ್ತಾರೆ..! ಶಾಲಾ ವಾಹನ ಎಂದ...
02-09-25 08:00 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
03-09-25 03:45 pm
Mangalore Correspondent
College student Missing, Mangalore: ಮಂಗಳೂರಿನಲ...
03-09-25 11:53 am
ಧರ್ಮಸ್ಥಳ ಪ್ರಕರಣ ಮತ್ತೆ ತಿರುವು ; ಹತ್ಯೆಗೀಡಾದವರ ಸ...
02-09-25 10:26 pm
Mangalore Mukka Accident: ಮುಕ್ಕ ಜಂಕ್ಷನ್ನಲ್ಲಿ...
02-09-25 04:44 pm
Bribe Puttur, Tahsildar Absconding, Lokayukta...
02-09-25 02:17 pm
03-09-25 05:40 pm
Bangalore Correspondent
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm
Mangalore Auto Driver, Fake story, Falnir att...
02-09-25 11:22 am
Udupi, Brahmavar Suicide: 16 ವರ್ಷ ಹಿಂದಿನ ಕೊಲೆ...
01-09-25 09:21 pm