ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm