ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm