ಬ್ರೇಕಿಂಗ್ ನ್ಯೂಸ್
09-03-21 05:54 pm Headline Karnataka News Network ದೇಶ - ವಿದೇಶ
ದಮ್ಮಾಮ್, ಮಾ.9: ಇರಾನ್ ಪ್ರೇರಿತ ಯೆಮೆನ್ ಬಂಡುಕೋರರು ಸೌದಿ ಅರೇಬಿಯಾದ ಎರಡು ಅತಿದೊಡ್ಡ ಪೆಟ್ರೋಲಿಯಂ ಸ್ಥಾವರಗಳನ್ನು ಗುರಿಯಾಗಿರಿಸಿ ಮಿಸೈಲ್ ದಾಳಿ ನಡೆಸಿದ್ದಾರೆ. ಡ್ರೋಣ್ ಮೂಲಕ ದಾಳಿ ಆಗಿರುವುದನ್ನು ಸೌದಿ ಅರೇಬಿಯಾ ಸರಕಾರ ದೃಢಪಡಿಸಿದೆ. ದಮ್ಮಾಮ್ ಬಳಿಯಿರುವ ರಾಸ್ ತನುರಾ ಪೋರ್ಟ್ ಮತ್ತು ಡಹ್ರಾನ್ ಸ್ಥಾವರ ಜಗತ್ತಿನ ಅತಿ ದೊಡ್ಡ ಪೆಟ್ರೋಲಿಯಂ ಸ್ಥಾವರಗಳಲ್ಲಿ ಒಂದಾಗಿದ್ದು ಆದಿತ್ಯವಾರ ಅದರ ಮೇಲೆ ಬಾಂಬ್ ದಾಳಿ ನಡೆದಿದೆ.

ಸಮುದ್ರ ಪ್ರದೇಶದಿಂದ ಮಿಸೈಲ್ ಮತ್ತು ಡ್ರೋಣ್ ದಾಳಿ ಮಾಡಿದ್ದು ಅದನ್ನು ತಡೆದಿದ್ದೇವೆ ಎಂದು ಸೌದಿ ಅರೇಬಿಯಾ ಸಚಿವಾಲಯ ಹೇಳಿಕೊಂಡಿದೆ. ಡಹ್ರಾನ್ ಸಿಟಿಯಲ್ಲಿರುವ ಆರಾಮ್ಕೋ ತೈಲ ಸ್ಥಾವರ ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ದಾಳಿ ಘಟನೆಯಲ್ಲಿ ಯಾವುದೇ ಸಾವು – ನೋವು ಆಗಿಲ್ಲ ಎಂದು ಸಚಿವಾಲಯದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇರಾನ್ ಪ್ರೇರಿತ ಯೆಮೆನ್ ಪ್ರಾಂತದ ಹೌತಿ ಬಂಡುಕೋರರು ಮತ್ತು ಸೌದಿ ಅರೇಬಿಯಾ ನಡುವಿನ ಸಂಘರ್ಷ ಹಲವು ವರ್ಷಗಳಿಂದ ನಡೆಯುತ್ತಿದೆ. ಇತ್ತೀಚೆಗೆ ಅಮೆರಿಕದ ಅಧ್ಯಕ್ಷ ಜೋ ಬೈಡನ್, ಯೆಮೆನ್ ಬಂಡುಕೋರರ ಸಂಘರ್ಷ ಕೊನೆಗಾಣಿಸುವ ಮಾತನ್ನಾಡಿದ್ದರು. ಮಾತುಕತೆ ಮೂಲಕ ಸುದೀರ್ಘ ಕಾಲದ ಸಮರವನ್ನು ಕೊನೆಗಾಣಿಸುವುದಾಗಿ ಹೇಳಿದ್ದರು. ಸೌದಿ ಅರೇಬಿಯಾಗೆ ಅಮೆರಿಕದ ಮಿಲಿಟರಿ ಬೆಂಬಲ ಇದ್ದು, ಯೆಮನ್ ವಿರುದ್ಧ ದಾಳಿ ನಡೆಸಲು ನೆರವು ನೀಡಿತ್ತು. ಆದರೆ, ಬೈಡನ್ ಅಧಿಕಾರಕ್ಕೆ ಬಂದ ಬಳಿಕ ಮಿಲಿಟರಿ ಬೆಂಬಲವನ್ನು ಹಿಂತೆಗೆಯುವ ಮಾತನ್ನಾಡಿದ್ದರು.

ಇದೇ ವೇಳೆ, ಯೆಮೆನ್ ಪ್ರಾಂತದ ಹೌತಿ ಬಂಡುಕೋರರ ಪರವಾಗಿ ಅದರ ಬ್ರಿಗೇಡಿಯರ್ ಒಬ್ಬ ಹೇಳಿಕೆ ಬಿಡುಗಡೆ ಮಾಡಿದ್ದು, ಜಗತ್ತಿನ ಅತಿ ದೊಡ್ಡ ತೈಲ ಸ್ಥಾವರಕ್ಕೆ 14 ಡ್ರೋಣ್ ಮತ್ತು ಎಂಟು ಮಿಸೈಲ್ ದಾಳಿ ನಡೆಸಲಾಗಿದೆ ಎಂದಿದ್ದಾನೆ. ದಾಳಿಯಿಂದ ದೊಡ್ಡ ಹಾನಿ ಆಗಿದ್ದಾದರೆ, ತೈಲ ಬೆಲೆ ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚುವ ಸಾಧ್ಯತೆಯಿದೆ. ಭಾರತಕ್ಕೂ ತೈಲವನ್ನು ಇರಾನ್ ಮತ್ತು ಸೌದಿಯಿಂದ ಆಮದು ಮಾಡಲಾಗುತ್ತಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am